7:47 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ವಿರೋಧ ಪಕ್ಷವನ್ನು ಹತ್ತಿಕ್ಕುವ ಕಾರ್ಯ ಕಾಂಗ್ರೆಸ್ ಆಡಳಿತ ಮಾಡುತ್ತಿದೆ: ಶಾಸಕ ವೇದವ್ಯಾಸ ಕಾಮತ್

20/07/2023, 15:23

ಬೆಂಗಳೂರು(reporterkarnataka.com): ಆಡಳಿತದಲ್ಲಿರುವ ಕಾಂಗ್ರೆಸ್ ಪಕ್ಷವು ಸರ್ವಾಧಿಕಾರಿ ಧೋರಣೆಯ ಮೂಲಕ ಸಂವಿಧಾನ ವಿರೋಧಿ ಕೆಲಸ ಮಾಡುತಿದ್ದು ಇವುಗಳನ್ನು ಮುಂದಿನ ದಿನಗಳಲ್ಲಿಯೂ ಗಟ್ಟಿ ಧ್ವನಿಯಲ್ಲಿ ವಿರೋಧಿಸುವುದಾಗಿ ಶಾಸಕ ಡಿ. ವೇದವ್ಯಾಸ
ಕಾಮತ್ ಹೇಳಿದ್ದಾರೆ.
ರಾಜಕೀಯ ಪಕ್ಷಗಳ ಮುಖಂಡರ ಸ್ವಾಗತ ಹಾಗೂ ಉಪಚಾರಕ್ಕಾಗಿ ಉನ್ನತ ಮಟ್ಟದ ಅಧಿಕಾರಿಗಳನ್ನು ಬಳಸಿಕೊಂಡಿರುವ ರಾಜ್ಯ ಸರಕಾರದ ನಡೆಯನ್ನು ವಿರೋಧಿಸುತ್ತೇವೆ. ರಾಜ್ಯ ಸರಕಾರ ಆಡಳಿತವನ್ನು ದುರುಪಯೋಗಪಡಿಸುತ್ತಿದ್ದು ಅದನ್ನು ಪ್ರಶ್ನಿಸುವ ಸಂದರ್ಭದಲ್ಲಿ ಉತ್ತರ ನೀಡುವುದು ಸರಕಾರದ ಕರ್ತವ್ಯ. ಆದರೆ ಪ್ರಶ್ನಿಸುವವರನ್ನೇ ಅಧಿವೇಶನದಿಂದ ಅಮಾನತು ಮಾಡುವ ಸರಕಾರದ ನಡೆ ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಹೇಳಿದರು.
ಗೌರವಾನ್ವಿತ ಸ್ಥಾನದಲ್ಲಿರುವ ಸ್ಪೀಕರ್ ಅವರು ಪಕ್ಷದ ವಕ್ತಾರರಂತೆ ವರ್ತಿಸುವ ಮೂಲಕ ವಿಧಾನಸಭೆಯ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಪ್ರತಿಭಟನೆಯನ್ನು ನೆಪವಾಗಿರಿಸಿ ವಿರೋಧ ಪಕ್ಷದ 10 ಸದಸ್ಯರನ್ನು ಅಮಾನತು ಮಾಡಲಾಗಿದೆ. ಈ ಹಿಂದೆ ವಿಧಾನಸಭೆಯಲ್ಲಿ ಗೊಂದಲವೆಬ್ಬಿಸಿ ದಾಂಧಲೆ ನಡೆಸಿದ್ದ ಘಟನೆಗಳನ್ನು ಆಡಳಿತ ಪಕ್ಷದ ನಾಯಕರು ನೆನಪಿಸಿಕೊಳ್ಳಬೇಕು ಎಂದರು.
ಕಾಂಗ್ರೆಸ್ ಪಕ್ಷವು ವಿರೋಧ ಪಕ್ಷವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತಿದ್ದು ಸರ್ವಾಧಿಕಾರಿಯಂತೆ ವರ್ತಿಸುವುದನ್ನು ವಿರೋಧಿಸುತ್ತೇವೆ. ರಾಜ್ಯ ಸರಕಾರದ ಈ ನೀತಿಯನ್ನು ಖಂಡಿಸಿ ಉಗ್ರ ಪ್ರತಿಭಟನೆ ನಡೆಸಲಾಗವುದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು