9:39 AM Monday28 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ವಿಶೇಷ ಚೇತನ ಮಕ್ಕಳ ಜತೆ ಖ್ಯಾತ ನಟ ಅನಂತನಾಗ್ 75ನೇ ಹುಟ್ಟುಹಬ್ಬ

05/09/2023, 13:47

ಮಂಗಳೂರು(reporterkarnataka.com): ದಿವ್ಯಾಂಗ ಮಕ್ಕಳನ್ನು ಬಹಳ ಪ್ರೀತಿಯಿಂದ ಸಲಹಿ, ಅವರ ಸರ್ವತ್ತೋಮುಖ ಬೆಳವಣಿಗೆಗೆ ಶ್ರಮಿಸುತ್ತಿರುವ ಅನಿರ್ವೇದ ಫೌಂಡೇಶನ್ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಖ್ಯಾತ ನಟ ಅನಂತನಾಗ್ ಹೇಳಿದರು.


ಅವರು ಕದ್ರಿ ಶಿವಭಾಗ್ ನಲ್ಲಿರುವ ಅನಿರ್ವೇದ ಫೌಂಡೇಶನ್ ಇದರ ಸ್ಥಳಾಂತರಿತ ನೂತನ ಕಟ್ಟಡ ಉದ್ಘಾಟಿಸಿ, ವಿಶೇಷ ಚೇತನ ಮಕ್ಕಳ ಜೊತೆಗೂಡಿ ತಮ್ಮ‌ 75 ನೇ ಜನ್ಮದಿನವನ್ನು ಆಚರಿಸಿದರು.
ಮಕ್ಕಳೊಂದಿಗೆ ಕೇಕ್ ಕಟ್ ಮಾಡಿ ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡ ಅನಂತನಾಗ್ ಅವರು ಮಕ್ಕಳಲ್ಲಿಯೇ ದೇವರನ್ನು ಕಾಣಬೇಕೆಂಬ ಉದಾತ್ತ ಚಿಂತನೆಯನ್ನು ಆನಂದಾಶ್ರಮದಲ್ಲಿ ತಮ್ಮ ಗುರುಗಳು ಹೇಳಿಕೊಟ್ಟಿದ್ದರು. ಇಂತಹ ದಿವ್ಯಾಂಗ ಮಕ್ಕಳಿಗೆ ದಾರಿದೀಪವಾಗಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ. ಶ್ವೇತಾ ಅವರು ಮಕ್ಕಳ ಬಾಳಿನಲ್ಲಿ ದೇವರ ರೂಪವಾಗಿ ಬಂದಿದ್ದೀರಿ. ನಿಮ್ಮ ಸೇವೆ ಇನ್ನಷ್ಟು ದಿವ್ಯ ಚೇತನ ಮಕ್ಕಳಲ್ಲಿ ಬೆಳಕಾಗಿ ಬರಲಿ. ಈ ಸಂಸ್ಥೆಯ ಎಲ್ಲರಿಗೂ ಶುಭವಾಗಲಿ ಎಂದು ಹಾರೈಸಿದರು.
ಡಾ. ಶ್ವೇತಾ ಅವರು ಸಂಸ್ಥೆಯ ಬೆಳವಣಿಗೆಗೆ ಸಹಕರಿಸಿದ ಎಲ್ಲರನ್ನು ವಂದಿಸಿದರು. ಕಾರ್ಪೋರೇಟರ್ ನವೀನ್ ಡಿಸೋಜ ಅವರು ಮಾತನಾಡಿ, ಪಾಲಿಕೆ ಮತ್ತು ವೈಯಕ್ತಿಕವಾಗಿ ಸಂಸ್ಥೆಗೆ ಅಗತ್ಯ ನೆರವನ್ನು ನೀಡಲು ಬದ್ಧ ಎಂದು ತಿಳಿಸಿದರು.‌
ಡಾ. ರವಿಚಂದ್ರ ಶುಭ ಹಾರೈಸಿದರು.‌‌‌ಅನಂತನಾಗ್ ಪತ್ನಿ ಗಾಯತ್ರಿ ನಾಗ್, ಮಗಳು ಅದಿತಿ, ಅಳಿಯ ವಿವೇಕ್, ಆತ್ಮೀಯರಾದ ಮಂಗಲ್ಪಾಡಿ ನರೇಶ್ ಶೆಣೈ, ಅಂಜನಾ ಕಾಮತ್ ಹಾಗೂ ಸಂಸ್ಥೆಯ ಮಕ್ಕಳ ಪೋಷಕರು, ಹಿತೈಷಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು