12:15 PM Thursday27 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ‘ಸದ್ಧರ್ಮಗೀತ’ ನಾಲ್ಕು ಕಾವ್ಯ ಕಥನಗಳ ಗುಚ್ಛ ಕೃತಿ ಲೋಕಾರ್ಪಣೆ

03/01/2025, 23:50

ಬೆಂಗಳೂರು( reporterkarnataka.com):ಹಿರಿಯ ಐಎಎಸ್ ಅಧಿಕಾರಿ ರಾಜ್ಯ ಸರ್ಕಾರದ ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ನೂತನ ಕೃತಿ ‘ಸದ್ಧರ್ಮಗೀತ ‘ ನಾಲ್ಕು ಕಾವ್ಯಕಥನಗಳ ಗುಚ್ಛ ಲೋಕಾರ್ಪಣೆ ಸಮಾರಂಭವನ್ನು ನಗರದ ಇನ್ಫೆಂಟ್ರಿ ರಸ್ತೆಯ ಐಎಎಸ್ ಅಧಿಕಾರಿಗಳ ಸಂಘದಲ್ಲಿ ಆಯೋಜಿಸಲಾಗಿತ್ತು.
ಸೆಂಟರ್ ಫಾರ್ ಸಸ್ಟೈನೆಬಲ್ ಡೆವಲಪ್ಮೆಂಟ್ ಮತ್ತು ಐಎಎಸ್ ಅಧಿಕಾರಿಗಳ ಸಂಘ ಸಹಯೋಗದಲ್ಲಿ ಏರ್ಪಡಿಸಿರುವ ಈ ಸಮಾರಂಭದ ಅಧ್ಯಕ್ಷತೆಯನ್ನು ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಜಸ್ಟಿಸ್ ಶಿವರಾಜ ವಿ. ಪಾಟೀಲ್ ವಹಿಸಿ ಕೃ ತಿ ಲೋಕಾರ್ಪಣೆ ಮಾಡಿ ಮಾತನಾಡುತ್ತ ಕಾವ್ಯಕ್ಕೆ ಚುಂಬಕ ಶಕ್ತಿ ಉಂಟು. ಅದು ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತದೆ. ಭಾವಯತ್ರಿ ಪ್ರತಿಭೆವುಳ್ಳವರು ಕೂಡ ಕಾವ್ಯ ರಚನೆಗೆ ಕೈ ಹಾಕಿದವರುಂಟು, ಅಂತಹವರು ಕಾರಯಿತ್ರಿಯ ಕೈಯನ್ನು ಹಿಡಿಯುತ್ತಾರೆ. ಡಾ.ಎ ರವೀಂದ್ರರವರು ಈ ಸಾಲಿಗೆ ಸೇರಿದವರು . ಲೌಕಿಕ ಜ್ಞಾನ ಭಾಷೆ ಇಂಗ್ಲಿಷ್, ಮಾತೃಭಾಷೆ ತೆಲುಗು, ಹೃದಯದ ಭಾಷೆಯಾಗಿ ಕನ್ನಡದಲ್ಲಿ ಕಾವ್ಯ ಸಂವೇದನೆ ಇರುವ ವೈಚಾರಿಕ ಕಾವ್ಯ ‘ಸದ್ಧರ್ಮ ಗೀತ’ ನಮ್ಮ ಮುಂದೆ ಇಟ್ಟಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ ವೆಂಕಟೇಶರವರು ಕೃತಿ ಕುರಿತು ಇದು ಭಗವದ್ಗೀತೆಯಲ್ಲ ಬದಲಾಗಿ ಜೀವನದ ಆಕೃತಿಯ ಧರ್ಮ ವಿಚಾರಕ್ಕೆ ಸಂಬಂಧಿಸಿದ್ದು. ಇಲ್ಲಿ ಬುದ್ಧ ಧರ್ಮ, ಬಸವ ಧರ್ಮ ಮತ್ತು ಅಂಬೇಡ್ಕರ್ ಧರ್ಮ ಒಂದಲ್ಲೊಂದು ತಳಕು ಹಾಕಿಕೊಂಡಿದೆ. ಸರಳವೂ ಅರ್ಥ ಗುಂಫನವು ಆದ ಗಪದ್ಯವೆಂಬ ಕಥನದಲ್ಲಿ ತಮ್ಮ ಕಾವ್ಯ ರಚನೆಯನ್ನು ಹೆಣೆದಿದ್ದಾರೆ ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಸೂರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು