1:32 PM Tuesday13 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ‘ಸದ್ಧರ್ಮಗೀತ’ ನಾಲ್ಕು ಕಾವ್ಯ ಕಥನಗಳ ಗುಚ್ಛ ಕೃತಿ ಲೋಕಾರ್ಪಣೆ

03/01/2025, 23:50

ಬೆಂಗಳೂರು( reporterkarnataka.com):ಹಿರಿಯ ಐಎಎಸ್ ಅಧಿಕಾರಿ ರಾಜ್ಯ ಸರ್ಕಾರದ ವಿಶ್ರಾಂತ ಮುಖ್ಯ ಕಾರ್ಯದರ್ಶಿ ಡಾ. ಎ.ರವೀಂದ್ರ ಅವರ ನೂತನ ಕೃತಿ ‘ಸದ್ಧರ್ಮಗೀತ ‘ ನಾಲ್ಕು ಕಾವ್ಯಕಥನಗಳ ಗುಚ್ಛ ಲೋಕಾರ್ಪಣೆ ಸಮಾರಂಭವನ್ನು ನಗರದ ಇನ್ಫೆಂಟ್ರಿ ರಸ್ತೆಯ ಐಎಎಸ್ ಅಧಿಕಾರಿಗಳ ಸಂಘದಲ್ಲಿ ಆಯೋಜಿಸಲಾಗಿತ್ತು.
ಸೆಂಟರ್ ಫಾರ್ ಸಸ್ಟೈನೆಬಲ್ ಡೆವಲಪ್ಮೆಂಟ್ ಮತ್ತು ಐಎಎಸ್ ಅಧಿಕಾರಿಗಳ ಸಂಘ ಸಹಯೋಗದಲ್ಲಿ ಏರ್ಪಡಿಸಿರುವ ಈ ಸಮಾರಂಭದ ಅಧ್ಯಕ್ಷತೆಯನ್ನು ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಜಸ್ಟಿಸ್ ಶಿವರಾಜ ವಿ. ಪಾಟೀಲ್ ವಹಿಸಿ ಕೃ ತಿ ಲೋಕಾರ್ಪಣೆ ಮಾಡಿ ಮಾತನಾಡುತ್ತ ಕಾವ್ಯಕ್ಕೆ ಚುಂಬಕ ಶಕ್ತಿ ಉಂಟು. ಅದು ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತದೆ. ಭಾವಯತ್ರಿ ಪ್ರತಿಭೆವುಳ್ಳವರು ಕೂಡ ಕಾವ್ಯ ರಚನೆಗೆ ಕೈ ಹಾಕಿದವರುಂಟು, ಅಂತಹವರು ಕಾರಯಿತ್ರಿಯ ಕೈಯನ್ನು ಹಿಡಿಯುತ್ತಾರೆ. ಡಾ.ಎ ರವೀಂದ್ರರವರು ಈ ಸಾಲಿಗೆ ಸೇರಿದವರು . ಲೌಕಿಕ ಜ್ಞಾನ ಭಾಷೆ ಇಂಗ್ಲಿಷ್, ಮಾತೃಭಾಷೆ ತೆಲುಗು, ಹೃದಯದ ಭಾಷೆಯಾಗಿ ಕನ್ನಡದಲ್ಲಿ ಕಾವ್ಯ ಸಂವೇದನೆ ಇರುವ ವೈಚಾರಿಕ ಕಾವ್ಯ ‘ಸದ್ಧರ್ಮ ಗೀತ’ ನಮ್ಮ ಮುಂದೆ ಇಟ್ಟಿದ್ದಾರೆ ಎಂದು ತಿಳಿಸಿದರು.
ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ ವೆಂಕಟೇಶರವರು ಕೃತಿ ಕುರಿತು ಇದು ಭಗವದ್ಗೀತೆಯಲ್ಲ ಬದಲಾಗಿ ಜೀವನದ ಆಕೃತಿಯ ಧರ್ಮ ವಿಚಾರಕ್ಕೆ ಸಂಬಂಧಿಸಿದ್ದು. ಇಲ್ಲಿ ಬುದ್ಧ ಧರ್ಮ, ಬಸವ ಧರ್ಮ ಮತ್ತು ಅಂಬೇಡ್ಕರ್ ಧರ್ಮ ಒಂದಲ್ಲೊಂದು ತಳಕು ಹಾಕಿಕೊಂಡಿದೆ. ಸರಳವೂ ಅರ್ಥ ಗುಂಫನವು ಆದ ಗಪದ್ಯವೆಂಬ ಕಥನದಲ್ಲಿ ತಮ್ಮ ಕಾವ್ಯ ರಚನೆಯನ್ನು ಹೆಣೆದಿದ್ದಾರೆ ಅಭಿಪ್ರಾಯ ವ್ಯಕ್ತಪಡಿಸಿದರು.
ಮೈಸೂರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ, ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಡಾ. ಸಿ. ಸೋಮಶೇಖರ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು