3:17 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ವಿಶ್ವ ಭೂದಿನ: ಕದ್ರಿ ಪಾರ್ಕ್ ನಲ್ಲಿ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ ಬಳಕೆ, ಹಸಿ ಕಸದಿಂದ ಗೊಬ್ಬರ ತಯಾರಿ, ಬಯೋ ಎಂಜೈಮ್ ಬಗ್ಗೆ ಪ್ರಾತ್ಯಕ್ಷಿಕೆ

22/04/2024, 19:15

ಮಂಗಳೂರು(reporterkarnataka.com): ಏಪ್ರಿಲ್ 22ರ ವಿಶ್ವ ಭೂದಿನದ ಪ್ರಯುಕ್ತ ‘ಪರಿಸರಕ್ಕಾಗಿ ನಾವು’ ಗುಂಪಿನ ದಕ್ಷಿಣ ಕನ್ನಡ, ಉಡುಪಿ ಘಟಕದ ಸರೋಜಾ ಪ್ರಕಾಶ್- ಪ್ರಕಾಶ್ ದಂಪತಿ ಹಾಗೂ ಅಶ್ವಿನಿ ಕೆ. ಭಟ್ ಅವರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಸಂಜೆ ಎರಡು ತಾಸು ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ ಬಳಕೆ, ಹಸಿ ಕಸದಿಂದ ಗೊಬ್ಬರ ತಯಾರಿ, ಬಯೋ ಎಂಜೈಮ್ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿ
ಕೊಟ್ಟರು.
ಘೋಷಣಾ ವಾಕ್ಯಗಳನ್ನು ಮನೆಯಲ್ಲೇ ಲಭ್ಯವಿದ್ದ ಹಳೆ ರಟ್ಟು, ಕಾಗದಗಳನ್ನು ಪಯೋಗಿಸಿ, ಹಳೆ ಪಿವಿಸಿ ಪೈಪ್ ಗಳಿಗೆ ಅಂಟಿಸಿ ಫಲಕಗಳನ್ನು ಮಾಡಿ ಪ್ರದರ್ಶನಕ್ಕೆ ಇಟ್ಟಿದ್ದರು. ಸದಸ್ಯೆಯರಾದ ದೇವಕಿ ಜಿ ಕೆ., ಅಂಜನಿ ವಸಂತ್ ಹಾಗೂ ಸಮಾನಮನಸ್ಕರು ಅವರಿಗೆ ಸಹಕರಿಸಿದರು. ಈ ವರ್ಷದ ಭೂದಿನದ ಘೋಷಣೆಯು ‘ಭೂಗ್ರಹ vs ಪ್ಲಾಸ್ಟಿಕ್’. ಪ್ಲಾಸ್ಟಿಕ್ ನ ದುಷ್ಪರಿಣಾಮಗಳು, ಅದಕ್ಕೆ ಪರ್ಯಾಯ, ಗೊಬ್ಬರ ತಯಾರಿಕೆ ಬಗ್ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಬಂತು. ಸಾಧಾರಣ 60 ಜನರನ್ನು ತಲಪಲು ಸಾಧ್ಯವಾಯಿತು. ಮುಂಗಡವಾಗಿ ಈ ಮೇಲ್ ಮೂಲಕ ಪಾರ್ಕಿನ ಆಡಳಿತದವರಿಂದ ಅನುಮತಿಯನ್ನು ಪಡೆದು ಈ ಕಾರ್ಯಕ್ರಮವನ್ನು ಮಾಡಲಾಯಿತು. ಮುಂದೆಯೂ ಈ ರೀತಿಯ ಸರಳ ವಿಧಾನಗಳಿಂದ ಹೆಚ್ಚಿನ ಜನರಲ್ಲಿ ಅರಿವನ್ನು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಯೋಜನೆಯಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಒಗ್ಗೂಡಿದರೆ ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಸಂಚಾಲಕರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು