4:39 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಿಶ್ವ ಭೂದಿನ: ಕದ್ರಿ ಪಾರ್ಕ್ ನಲ್ಲಿ ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ ಬಳಕೆ, ಹಸಿ ಕಸದಿಂದ ಗೊಬ್ಬರ ತಯಾರಿ, ಬಯೋ ಎಂಜೈಮ್ ಬಗ್ಗೆ ಪ್ರಾತ್ಯಕ್ಷಿಕೆ

22/04/2024, 19:15

ಮಂಗಳೂರು(reporterkarnataka.com): ಏಪ್ರಿಲ್ 22ರ ವಿಶ್ವ ಭೂದಿನದ ಪ್ರಯುಕ್ತ ‘ಪರಿಸರಕ್ಕಾಗಿ ನಾವು’ ಗುಂಪಿನ ದಕ್ಷಿಣ ಕನ್ನಡ, ಉಡುಪಿ ಘಟಕದ ಸರೋಜಾ ಪ್ರಕಾಶ್- ಪ್ರಕಾಶ್ ದಂಪತಿ ಹಾಗೂ ಅಶ್ವಿನಿ ಕೆ. ಭಟ್ ಅವರು ನಗರದ ಕದ್ರಿ ಪಾರ್ಕ್ ನಲ್ಲಿ ಭಾನುವಾರ ಸಂಜೆ ಎರಡು ತಾಸು ಸಾರ್ವಜನಿಕರಿಗೆ ಪ್ಲಾಸ್ಟಿಕ್ ಮಿತ ಬಳಕೆ, ಹಸಿ ಕಸದಿಂದ ಗೊಬ್ಬರ ತಯಾರಿ, ಬಯೋ ಎಂಜೈಮ್ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಿ
ಕೊಟ್ಟರು.
ಘೋಷಣಾ ವಾಕ್ಯಗಳನ್ನು ಮನೆಯಲ್ಲೇ ಲಭ್ಯವಿದ್ದ ಹಳೆ ರಟ್ಟು, ಕಾಗದಗಳನ್ನು ಪಯೋಗಿಸಿ, ಹಳೆ ಪಿವಿಸಿ ಪೈಪ್ ಗಳಿಗೆ ಅಂಟಿಸಿ ಫಲಕಗಳನ್ನು ಮಾಡಿ ಪ್ರದರ್ಶನಕ್ಕೆ ಇಟ್ಟಿದ್ದರು. ಸದಸ್ಯೆಯರಾದ ದೇವಕಿ ಜಿ ಕೆ., ಅಂಜನಿ ವಸಂತ್ ಹಾಗೂ ಸಮಾನಮನಸ್ಕರು ಅವರಿಗೆ ಸಹಕರಿಸಿದರು. ಈ ವರ್ಷದ ಭೂದಿನದ ಘೋಷಣೆಯು ‘ಭೂಗ್ರಹ vs ಪ್ಲಾಸ್ಟಿಕ್’. ಪ್ಲಾಸ್ಟಿಕ್ ನ ದುಷ್ಪರಿಣಾಮಗಳು, ಅದಕ್ಕೆ ಪರ್ಯಾಯ, ಗೊಬ್ಬರ ತಯಾರಿಕೆ ಬಗ್ಗೆ ಜನರಿಂದ ಉತ್ತಮ ಪ್ರತಿಕ್ರಿಯೆ ಬಂತು. ಸಾಧಾರಣ 60 ಜನರನ್ನು ತಲಪಲು ಸಾಧ್ಯವಾಯಿತು. ಮುಂಗಡವಾಗಿ ಈ ಮೇಲ್ ಮೂಲಕ ಪಾರ್ಕಿನ ಆಡಳಿತದವರಿಂದ ಅನುಮತಿಯನ್ನು ಪಡೆದು ಈ ಕಾರ್ಯಕ್ರಮವನ್ನು ಮಾಡಲಾಯಿತು. ಮುಂದೆಯೂ ಈ ರೀತಿಯ ಸರಳ ವಿಧಾನಗಳಿಂದ ಹೆಚ್ಚಿನ ಜನರಲ್ಲಿ ಅರಿವನ್ನು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಯೋಜನೆಯಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಒಗ್ಗೂಡಿದರೆ ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ ಎಂದು ಸಂಚಾಲಕರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು