8:52 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ವಿಶ್ವ ಕ್ಯಾನ್ಸರ್‌ ದಿನಾಚರಣೆ: ರಸ್ತೆ ಸಾರಿಗೆ ನೌಕರರಿಗೆ ಉಚಿತ ಓರಲ್‌ ಹಾಗೂ ಸ್ತನ ಕ್ಯಾನ್ಸರ್‌ ತಪಾಸಣೆ

05/02/2025, 10:11

ಬೆಂಗಳೂರು(reporterkarnataka.com): ವಿಶ್ವ ಕ್ಯಾನ್ಸರ್‌ ದಿನಾಚರಣೆ ಪ್ರಯುಕ್ತ ಕೆಎಸ್‌ಆರ್‌ಟಿಸಿ ಹಾಗೂ ಎಚ್‌ಸಿಜಿ ಕಾನ್ಸರ್‌ ಕೇಂದ್ರದ ಸಹಯೋಗದೊಂದಿಗೆ ಒಂದು ಸಾವಿರಕ್ಕೂ ಅಧಿಕ ರಸ್ತೆ ಸಾರಿಗೆ ನೌಕರರಿಗೆ ಉಚಿತ ಓರಲ್‌ ಹಾಗೂ ಸ್ತನಕ್ತಾನ್ಸರ್‌ ತಪಾಸಣಾ ನಡೆಸಲಾಯಿತು.


ಕೆಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬು ಕುಮಾರ್ ಹಾಗೂ ಎಚ್‌ಸಿಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್ ಆರೋಗ್ಯ ತಪಾಸಣಾ ಮೇಳಕ್ಕೆ ಚಾಲನೆ ನೀಡಿದರು.
ಈ ಕುರಿತು ಮಾತನಾಡಿದ ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬು ಕುಮಾರ್, “ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದ ವತಿಯಿಂದ ವಿಶ್ವ ಕ್ಯಾನ್ಸರ್‌ ದಿನದ ಪ್ರಯುಕ್ತ ನಮ್ಮ ನೌಕರರಿಗೆ ಸ್ತನ ಕ್ಯಾನ್ಸರ್‌ ಹಾಗೂ ಓರಲ್‌ ಕ್ಯಾನ್ಸರ್‌ ತಪಾಸಣೆ ಆಯೋಜಿಸಿದ್ದ ಶ್ವಾಘನೀಯ. ಕ್ಯಾನ್ಸರ್‌ನನ್ನು ಪ್ರಾರಂಭದಲ್ಲಿಯೇ ಪತ್ತೆ ಹಚ್ಚುವುದು ಅತಿ ಅವಶ್ಯಕ ಹಾಗೂ ಇದರ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸಬೇಕಿದೆ. ತಮ್ಮ ಕೆಲಸದ ಒತ್ತಡದಲ್ಲಿ ಕ್ಯಾನ್ಸರ್‌ ಕುರಿತು ರೋಗಲಕ್ಷಣಗಳನ್ನು ಯಾರೂ ನಿರ್ಲಕ್ಷಿಸಬಾರದು. ನಮ್ಮ ಉದ್ಯೋಗಿಗಳ ಆರೋಗ್ಯವೇ ನಮ್ಮ ಕಾಳಜಿ ಎಂದು ಹೇಳಿದರು.
ಎಚ್‌ಸಿಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್ ಮಾತನಾಡಿ, ವಿಶ್ವ ಕ್ಯಾನ್ಸರ್‌ ದಿನದ ಪ್ರಯುಕ್ತ ರಸ್ತೆ ಸಾರಿಗೆ ನೌಕರರಿಗೆ ಉಚಿತವಾಗಿ ರಲ್‌ ಹಾಗೂ ಸ್ತನಕ್ಯಾನ್ಸರ್‌ನ ತಪಾಸಣೆಯನ್ನು ನಡೆಸುವ ಜವಾಬ್ದಾರಿ ಹೊರುವ ಮೂಲಕ ಕ್ಯಾನ್ಸರ್‌ ಆರಂಭದ ಪತ್ತೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಸಾಕಷ್ಟು ಜನರು ಕ್ಯಾನ್ಸರ್‌ನ ರೋಗಲಕ್ಷಣಗಳ ಬಗ್ಗೆ ಗಮನ ನೀಡದೇ, ಕೊನೆ ಹಂತದವರೆಗೂ ನಿರ್ಲಕ್ಷಿಸುತ್ತಾರೆ, ಇದರಿಂದ ಚಿಕಿತ್ಸೆ ಕಷ್ಟಕರವಾಗಲಿದೆ,ಯಾವುದೇ ರೀತಿಯ ಕ್ಯಾನ್ಸರ್‌ ಆದರೂ ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿದರೆ, ಅದನ್ನು ಗುಣಪಡಿಸಬಹುದು, ಈ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಿ, ಕ್ಯಾನ್ಸರ್‌ ವಿರುದ್ಧ ಹೋರಾಡೋಣ ಎಂದು ಹೇಳಿದರು.
1 ಸಾವಿರಕ್ಕೂ ಕ್ಕೂ ಹೆಚ್ಚು ರಸ್ತೆ ಸಾರಿಗೆ ಕಾರ್ಮಿಕರು ತಪಾಸಣಾ ಮೇಳದಲ್ಲಿ ಪಾಲ್ಗೊಂಡಿದ್ದರು. ಇದು ರಸ್ತೆ ಸಾರಿಗೆಯಲ್ಲೇ ಅತಿ ದೊಡ್ಡ ಕ್ಯಾನ್ಸರ್‌ ಜಾಗೃತಿ ಅಭಿಯಾನವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು