7:45 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ವಿಶ್ವ ಕೊಂಕಣಿ ಕೇಂದ್ರದಲ್ಲಿ ಮೈಕಲ್ ಡಿಸೋಜ ವಿಶನ್ ಕೊಂಕಣಿ ಪುಸ್ತಕ ಕಾರ್ಯಕ್ರಮ

07/04/2024, 21:19

ಮಂಗಳೂರು(reporterkarnataka.com):
ಲೇಖಕರು ವೈಜ್ಞಾನಿಕ ಮನೋಭಾವ, ತಾರ್ಕಿಕತೆ ಮತ್ತು ಸಂವೇದನಾಶೀಲತೆಯನ್ನು ಮೈಗೂಡಿಸಿಕೊಂಡರೆ ಮಾತ್ರ ಉತ್ತಮ ಸಾಹಿತ್ಯ ಕೃ ತಿ ರಚಿಸಲು ಸಾಧ್ಯ. 25 ಮಿಲಿ ಸುಗಂದ ದ್ರವ್ಯ ತಯಾರಿಸಲು ಸಾವಿರಾರು ಹೂವಿನ ಪಕಳೆಗಳನ್ನು ಅರೆಯಬೇಕಾಗುತ್ತದೆಯೋ ಹಾಗೆ ಒಂದು ಸಾಹಿತ್ಯ ಕೃತಿ ರಚನೆಯ ಹಿಂದೆ ಸಾವಿರಾರು ಪುಟಗಳ ಓದು, ಅಭ್ಯಾಸ ಇರುತ್ತದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ, ಗೋವಾದ ಹಿರಿಯ ಸಾಹಿತಿ ಶ್ರೀ ದತ್ತಾ ದಾಮೋದರ ನಾಯಕ್ ಅಭಿಪ್ರಾಯಪಟ್ಟರು.
ಶ್ರೀ ದತ್ತಾ ನಾಯಕ್ ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದಲ್ಲಿ ನಡೆದ ಮೈಕಲ್ ಡಿಸೋಜ ವಿಶನ್ ಕೊಂಕಣಿ ಪುಸ್ತಕ ಪ್ರಕಟಣೆ ಯೋಜನೆಯಡಿ ಆಯ್ಕೆಯಾದ ಲೇಖಕರ ಬಳಗವನ್ನು ಉದ್ದೇಶಿಸಿ ಮಾತನಾಡುತ್ತಿದರು.
ಶ್ರೀ ದತ್ತಾ ನಾಯಕ್ ಬರವಣಿಗೆಯ ಭಾಷೆ ಸಾಧ್ಯವಾದಷ್ಟು ಸರಳ ಮತ್ತು ಹೃದ್ಯವಾದಾಗ ವಾಚಕನಿಗೆ ಓದುವ ಅನುಭೂತಿ ದಕ್ಕುತ್ತದೆ. ಅತಿಯಾದ ಅಲಂಕಾರ, ಸಾಂಕೇತಿಕತೆ, ಪ್ರತಿಮೆ – ಪ್ರತೀಕಗಳನ್ನು ಹೇರಿಕೊಂದು ರಚಿಸಿದ ಸಾಹಿತ್ಯ ಕೃತಿಯಿಂದ ಓದುಗರು ವಿಮುಖರಾಗುವ ಸಾಧ್ಯತೆಗಳು ಹೆಚ್ಚು. ಓದುಗ ಪುಸ್ತಕ ಓದುವುದು ಅವನ ಸುಖಕ್ಕಾಗಿ ಹೊರತು ನಮಗಾಗಿ ಅಲ್ಲ ಎಂಬುದನ್ನು ಪುಸ್ತಕ ಲೇಖಕರೂ, ಪ್ರಕಾಶಕರೂ ಅರ್ಥ ಮಾಡಿಕೊಳ್ಳಬೇಕು. ಒಂದು ಉತ್ತಮ ಪುಸ್ತಕ ರೂಪಿಸುವಲ್ಲಿ ಪ್ರಕಾಶಕನ ಕೆಲಸವೂ ಗಮನಾರ್ಹ. ಪುಸ್ತಕ ಪ್ರಕಾಶನವೆಂದರೆ ಅದು ಬರೀ ಪ್ಯಾಕೆಜಿಂಗ್ ಕೆಲಸ ಮಾತ್ರವಲ್ಲ ಎಂದು ಉಪಸ್ಥಿತರಿದ್ದ ಲೇಖಕ – ಪ್ರಕಾಶಕರಿಗೆ ತಮ್ಮ ಸ್ವಂತ ಅನುಭವಗಳನ್ನು ಹಂಚಿಕೊಳ್ಳು ವುದರ ಮೂಲಕ ದತ್ತಾ ನಾಯಕ್ ಸಲಹೆ ನೀಡಿದರು.


ವಿಶ್ವ ಕೊಂಕಣಿ ಕೇಂದ್ರದ ಸ್ಥಾಪಕ ಬಸ್ತಿ ವಾಮನ್ ಶೆಣೈಯವರ ಪ್ರತಿಮೆಗೆ ಹಾರಾರ್ಪಣೆ ಮತ್ತು ದೀಪ ಪ್ರಜ್ವಲನೆಯ ಮೂಲಕ ಆರಂಭವಾದ ಕಾರ್ಯಕ್ರಮದಲ್ಲಿ ಪತ್ರಕರ್ತ ಎಚ್ಚೆಮ್ ಪೆರ್ನಾಲ್ ಅಧ್ಯಕ್ಷತೆಯಲ್ಲಿ ನಡೆದ “ಪುಸ್ತಕ ಪಂಚಾತಿಕೆ” ಎಂಬ ಸಂವಾದ ಕಾರ್ಯಕ್ರಮ ನಡೆಯಿತು. ಹಿರಿಯ ಲೇಖಕರಾದ ಶಕುಂತಲಾ ಆರ್. ಕಿಣಿ, ಎಡ್ಡಿ ಸಿಕ್ವೇರಾ ಲೇಖಕರ ಪರವಾಗಿ, ಪಯ್ಯನ್ನೂರು ರಮೇಶ ಪೈ ಮತ್ತು ಸಂತ ಅಲೋಶಿಯಸ್ ಪ್ರಕಾಶನದ ನಿರ್ದೇಶಕಿ ಡೊ| ವಿದ್ಯಾ ವಿನುತ ಡಿಸೋಜ ಪ್ರಕಾಶಕರ ಪರವಾಗಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು.
ಪುಸ್ತಕ ಪ್ರಕಾಶನ ಮತ್ತು ಮಾರಾಟ ವ್ಯವಸ್ಥೆಯಲ್ಲಿ ಲೇಖಕ ಮತ್ತು ಪ್ರಕಾಶಕರ ಜವಾಬ್ದಾರಿ, ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಲಭ್ಯವಿರುವ ಪರಿಹಾರ ಮಾರ್ಗೋಪಾಯಗಳ ಕುರಿತು ಸಂವಾದದಲ್ಲಿ ಮುಖ್ತವಾಗಿ ಚರ್ಚಿಸಲಾಯಿತು.
ವಿಶ್ವ ಕೊಂಕಣಿ ಮೈಕಲ್ ಡಿಸೋಜ ವಿಶನ್ ಕೊಂಕಣಿ ಪುಸ್ತಕ ಪ್ರಾಧಿಕಾರದ ಸಂಪಾದಕ ಮಂಡಳಿ ಸದಸ್ಯ ಕವಿ/ ಚಿಂತಕ ಟೈಟಸ್ ನೊರೊನ್ಹಾ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸುವುದರ ಜೊತೆಗೆ ಮೈಕಲ್ ಡಿಸೋಜ ವಿಶನ್ ಕೊಂಕಣಿ ಕಾರ್ಯಕ್ರಮದ ಕುರಿತು ವಿಸ್ತಾರ ಮಾಹಿತಿಯನ್ನು ನೀಡಿದರು. ಕೇಂದ್ರ ಸಾಹಿತ್ಯ ಅಕಾಡೆಮಿ ಕೊಂಕಣಿ ವಿಭಾಗ ಮುಖ್ಯಸ್ಥ ಹಾಗೂ ಸಂಪಾದಕ ಮಂಡಳಿ ಸದಸ್ಯ ಕವಿ ಮೆಲ್ವಿನ್ ರೊಡ್ರಿಗಸ್ ಪುಸ್ತಕ ಅನುದಾನಕ್ಕೆ ಆಯ್ಕೆಯಾದ ಕೃತಿ ಮತ್ತು ಲೇಖಕರ ಹೆಸರುಗಳ ಘೋಷಣೆ ಮಾಡಿದರು. ಗೋವಾ, ಮಹಾರಾಷ್ಟ್ರ, ಕರ್ನಾಟಕ ಮಾತ್ರವಲ್ಲ ದೂರದ ಆಸ್ಟ್ರೇಲಿಯಾದಿಂದಲೂ ಕೊಂಕಣಿ ಸಾಹಿತಿಗಳ 21 ಕೃತಿಗಳು ಅನುದಾನಕ್ಕೆ ಆಯ್ಕೆಯಾಗಿದ್ದು, ಸಾಹಿತಿಗಳು ಮತ್ತು ಅವರ ಪ್ರತಿನಿಧಿಗಳು ಹಾಜರಿದ್ದು ಪ್ರಸ್ತಾಪಕ್ಕೆ ಸಹಿ ಮಾಡಿದರು.
ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷರೂ, ಮೈಕಲ್ ಡಿಸೋಜ, ವಿಶನ್ ಕೊಂಕಣಿ ಕಾರ್ಯಕ್ರಮದ ನಿರ್ದೇಶಕರೂ ಆಗಿರುವ ಸಿ.ಎ. ನಂದಗೋಪಾಲ ಶೆಣೈ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಕೊಂಕಣಿ ಸಾಹಿತ್ಯಕ್ಕೆ ಉತ್ತೇಜನ ನಿಡುವುದು ಮತ್ತು ಆ ಮೂಲಕ ಕೊಂಕಣಿ ಭಾಷಾ ಸೇವೆ ಮಾಡುವುದು ವಿಶ್ವ ಕೊಂಕಣಿ ಕೇಂದ್ರದ ಮೂಲ ಉದ್ದೇಶಗಳಲ್ಲಿ ಒಂದು. ಮೈಕಲ್ ಡಿಸೋಜ ವಿಶನ್ ಕೊಂಕಣಿ ಕಾರ್ಯಕ್ರಮದ ಮೂಲಕ ಈ ಉದ್ದೇಶವನ್ನು ಈಡೇರಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದು ವಿಶ್ವ ಕೊಂಕಣಿ ಕೇಂದ್ರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿದ್ದು ಈ ಕಾರ್ಯಕ್ರಮ ನೂರು ಪುಸ್ತಕ ಪ್ರಕಟಣೆಗೆ ಸೀಮಿತಗೊಳಿಸುವುದಿಲ್ಲ. ಮುಂದುವರೆಸಿಕೊಂಡು ಹೋಗುತ್ತೇವೆ ಎಂದು ಭರವಸೆ ನೀಡಿದರು.
ವಿಶ್ವ ಕೊಂಕಣಿ ಕೇಂದ್ರದ ಉಪಾಧ್ಯಕ್ಷ ಗಿಲ್ಬರ್ಟ್ ಡಿಸೋಜ ವಂದಿಸಿದರು. ಸುಚಿತ್ರಾ ಎಸ್. ಶೆಣೈ ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರೂಪಿಸಿದರು.
ವಿಶ್ವ ಕೊಂಕಣಿ ಕೇಂದ್ರದ ವಿಶ್ವಸ್ಥರಾದ ವಿಲಿಯಮ್ ಡಿಸೋಜ, ಡಾ. ಕಸ್ತೂರಿ ಮೋಹನ್ ಪೈ, ಖಜಾಂಜಿ ಬಿ. ಆರ್. ಭಟ್ ಮತ್ತು ಕಾರ್ಯ ನಿರ್ವಹಣಾ ಅಧಿಕಾರಿ ಡಾ. ಬಿ. ದೇವದಾಸ ಪೈ ಈ ಸಂದರ್ಭದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು