10:09 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತ ‘ಬಲರಾಮ’ ಇನ್ನಿಲ್ಲ

07/05/2023, 22:16

ಮೈಸೂರು(reporterkarnataka.com): ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತ ಬಲರಾಮ(67) ಆನೆ ಭಾನುವಾರ ಸಂಜೆ ಕೊನೆಯುಸಿರೆಳೆದಿದೆ.
ತೀವ್ರ ಅನಾರೋಗ್ಯಕ್ಕೆ ಗುರಿಯಾಗಿದ್ದ ಬಲರಾಮ ನಾಗರಹೊಳೆ ಸಮೀಪದ ಭೀಮನಕಟ್ಟೆ ಆನೆ ಕ್ಯಾಂಪ್ ನಲ್ಲಿ ಚಿಕಿತ್ಸೆ ಪಡೆಯುತ್ತಿತ್ತು. ಇತ್ತೀಚಿಗಿನ ದಿನಗಳಲ್ಲಿ ಅದು ದ್ರವರೂಪದ ಆಹಾರ ಮಾತ್ರ ಸೇವಿಸುತ್ತಿತ್ತು. ನಾಗರಹೊಳೆ ಪಶು ವೈದ್ಯ ಡಾ. ರಮೇಶ್ ನೇತೃತ್ವದ ವೈದ್ಯರ ತಂಡ ಬಲರಾಮನಿಗೆ ಚಿಕಿತ್ಸೆ ನೀಡುತ್ತಿತ್ತು. ಬಾಯಿ ಹುಣ್ಣಿನಿಂದ ಬಳಲುತ್ತಿದ್ದ ಬಲರಾಮ ದ್ರವರೂಪ ಆಹಾರ ಮಾತ್ರ ಸೇವಿಸುತ್ತಿತ್ತು. ಇತ್ತೀಚಿಗಿನ ಕೆಲವು ದಿನಗಳಲ್ಲಿ ಅದಕ್ಕೆ ನೀರು ಕುಡಿಯಲು ಕೂಡ ಸಾಧ್ಯವಾಗುತ್ತಿರಲಿಲ್ಲ. ತೀವ್ರ ಅನಾರೋಗ್ಯಕ್ಕೆ ತುತ್ತಾದ ಬಲರಾಮ ಭಾನುವಾರ ಸಂಜೆ ಸುಮಾರು 4.30ರ ವೇಳೆಗೆ ಇಹಲೋಕ ತ್ಯಜಿಸಿತು.
ಸೌಮ್ಯ ಸ್ವಭಾವದ ಬಲರಾಮನನ್ನು 1987ರಲ್ಲಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಕಟ್ಟೆಪುರ ಅರಣ್ಯದಿಂದ ಹಿಡಿದು ತರಲಾಗಿತ್ತು. ನಂತರ ಅದಕ್ಕೆ 750 ಕೆಜಿ ಭಾರದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಲು ತರಬೇತಿ ನೀಡಲಾಯಿತು. ಮೈಸೂರು ದಸರಾ ಮೆರವಣಿಗೆಯಲ್ಲಿ ಬಲರಾಮ 14 ಬಾರಿ ಅಂಬಾರಿ ಹೊತ್ತು ಸಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು