9:31 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಿಶ್ವ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ಗಜ ಪಡೆ: ಸಚಿವ ಈಶ್ವರ ಖಂಡ್ರೆ ವಿಧ್ಯುಕ್ತ ಚಾಲನೆ

01/09/2023, 15:16

ಮೈಸೂರು(reporterkarnataka.com): ವಿಶ್ವ ಪ್ರಸಿದ್ಧ ಮೈಸೂರು ದಸರಾ ಹಬ್ಬಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಗಜ ಪಯಣಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು.
ಈ ಬಾರಿಯೂ ಅಭಿಮನ್ಯು ಆನೆಯೇ ಅಂಬಾರಿ ಹೊರುತ್ತದೆ. ಕಂಜನ್ ಈ ಬಾರಿ ದಸಾರಗೆ ಹೊಸ ಸೇರ್ಪಡೆಯಾಗಿದೆ. ನಿಶಾನೆ ಆನೆಯನ್ನ ಇನ್ನೂ ನಿರ್ಧಾರ ಮಾಡಿಲ್ಲ.
ಒಂದೂವರೆ ತಿಂಗಳು ದಸರಾ ಗಜಪಡೆಗಳು ತಾಲೀಮಿನಲ್ಲಿ ಭಾಗಿಯಾಗುತ್ತದೆ. ನಾಡ ಅದಿದೇವತೆ ಚಾಮುಂಡಿ ತಾಯಿಯ ಆಶೀರ್ವಾದ ಎಲ್ಲರ ಮೇಲೆ ಇರಲಿ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಮಾತನಾಡಿ, ಈ ಬಾರಿ ಅದ್ದೂರಿ ದಸರಾ ಮಾಡಲು ಸರ್ಕಾರ ತೀರ್ಮಾನಿಸಿದೆ. ಅದ್ದೂರಿ ದಸರಾ ಆಚರಣೆಗೆ ಸಿಎಂ ಸೂಚನೆ ನೀಡಿದ್ದಾರೆ. 30 ಕೋಟಿ ಅನುದಾನ ಕೊಡುವಂತೆ ಸಿಎಂಗೆ ಮನವಿ ಮಾಡಿದ್ದೇವೆ. ಮೊದಲ ಹಂತದಲ್ಲಿ 9 ಆನೆಗಳು ಕಾಡಿನಿಂದ ನಾಡಿಗೆ ಬರುತ್ತಿವೆ. ಇನ್ನೂ 5 ಆನೆಗಳು ನಂತರ ಅರಮನೆಗೆ ಬರುತ್ತದೆ. ಮಾವುತರು ಹಾಗೂ ಕಾವಾಡಿಗರಿಗೆ ಪ್ರೋತ್ಸಾಹ ನೀಡುತ್ತೇವೆ. ಧಾರ್ಮಿಕ ವಿಚಾರ, ರಾಜ್ಯಡಳಿತವನ್ನ ಸಂರಕ್ಷಣೆ ಮಾಡುವ ದೃಷ್ಟಿಯಿಂದ ಈ ಭಾರಿ ದಸರಾ ಆಚರಣೆ ಮಾಡುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು