8:49 AM Thursday16 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ವಿಶ್ವ ಟೇಕ್ವಾಂಡೋ: ಸಂಹಿತಾಗೆ ಎರಡು ಕಂಚಿನ ಪದಕ

31/10/2024, 15:34

ಮಂಗಳೂರು(reporterkarnataka.com): ಬ್ಯಾಂಕಾಕ್‌ನಲ್ಲಿ ನಡೆದ ಟೇಕ್ವಾಂಡೋ ವಿಶ್ವ ಚಾಂಪಿಯನ್‌ ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಎರಡು ಕಂಚಿನ ಪದಕ ಗಳಿಸಿದ್ದಾರೆ.


ಸೀನಿಯರ್‌ ವಿಭಾಗದಲ್ಲಿ ಸ್ಪರ್ಧಿಸಿ ಪೂಮ್ಸೆ ಮತ್ತು ಕ್ಯೂರೋಗಿ ವಿಭಾಗದಲ್ಲಿ ಪದಕ ಗಳಿಸಿದರು.
೨೦೨೧ರಲ್ಲಿ ನೇಪಾಳದಲ್ಲಿ ನಡೆದ ಜೂನಿಯರ್‌ ಚಾಂಪಿಯನ್‌ಶಿಪ್‌ ನಲ್ಲಿ ಚಿನ್ನದ ಪದಕ, ೨೦೨೨ರಂದು ಮಲೇಷ್ಯಾದಲ್ಲಿ ಬೆಳ್ಳಿ ಪದಕ, ೨೦೨೩ರಲ್ಲಿ ಮಲೇಷ್ಯಾದಲ್ಲಿ ಚಿನ್ನದ ಮತ್ತು ಕಂಚಿನ ಪದಕ ಗಳಿಸಿದ್ದರು.
ಈ ಬಾರಿ ಸೀನಿಯರ್‌ ವಿಭಾಗದಲ್ಲಿ ಸ್ಪರ್ಧಿಸಿ ಸಾಧನೆ ಮಾಡಿದ್ದಾರೆ. ನಿಟ್ಟೆ ಎನ್‌ಎಂಎಎಐಟಿ ಯಲ್ಲಿ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿರುವ ಸಂಹಿತಾ, ಕದ್ರಿಯ ವಾಸುದೇವ ಭಟ್‌ ಮತ್ತು ದೀಪಾ ಕೆ.ಎಸ್.‌ ದಂಪತಿ ಪುತ್ರಿ. ಗುರುರಾಜ್‌ ಇಟಗಿ ಮತ್ತು ನಿಖಿಲ್‌ ಶೆಟ್ಟಿ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು