4:38 AM Monday20 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ವಿಶ್ವ ಟೇಕ್ವಾಂಡೋ: ಸಂಹಿತಾಗೆ ಎರಡು ಕಂಚಿನ ಪದಕ

31/10/2024, 15:34

ಮಂಗಳೂರು(reporterkarnataka.com): ಬ್ಯಾಂಕಾಕ್‌ನಲ್ಲಿ ನಡೆದ ಟೇಕ್ವಾಂಡೋ ವಿಶ್ವ ಚಾಂಪಿಯನ್‌ ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಎರಡು ಕಂಚಿನ ಪದಕ ಗಳಿಸಿದ್ದಾರೆ.


ಸೀನಿಯರ್‌ ವಿಭಾಗದಲ್ಲಿ ಸ್ಪರ್ಧಿಸಿ ಪೂಮ್ಸೆ ಮತ್ತು ಕ್ಯೂರೋಗಿ ವಿಭಾಗದಲ್ಲಿ ಪದಕ ಗಳಿಸಿದರು.
೨೦೨೧ರಲ್ಲಿ ನೇಪಾಳದಲ್ಲಿ ನಡೆದ ಜೂನಿಯರ್‌ ಚಾಂಪಿಯನ್‌ಶಿಪ್‌ ನಲ್ಲಿ ಚಿನ್ನದ ಪದಕ, ೨೦೨೨ರಂದು ಮಲೇಷ್ಯಾದಲ್ಲಿ ಬೆಳ್ಳಿ ಪದಕ, ೨೦೨೩ರಲ್ಲಿ ಮಲೇಷ್ಯಾದಲ್ಲಿ ಚಿನ್ನದ ಮತ್ತು ಕಂಚಿನ ಪದಕ ಗಳಿಸಿದ್ದರು.
ಈ ಬಾರಿ ಸೀನಿಯರ್‌ ವಿಭಾಗದಲ್ಲಿ ಸ್ಪರ್ಧಿಸಿ ಸಾಧನೆ ಮಾಡಿದ್ದಾರೆ. ನಿಟ್ಟೆ ಎನ್‌ಎಂಎಎಐಟಿ ಯಲ್ಲಿ ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿರುವ ಸಂಹಿತಾ, ಕದ್ರಿಯ ವಾಸುದೇವ ಭಟ್‌ ಮತ್ತು ದೀಪಾ ಕೆ.ಎಸ್.‌ ದಂಪತಿ ಪುತ್ರಿ. ಗುರುರಾಜ್‌ ಇಟಗಿ ಮತ್ತು ನಿಖಿಲ್‌ ಶೆಟ್ಟಿ ಅವರಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು