10:43 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ವಿಶ್ವ ಟೇಕ್ವಾಂಡೋ ಕೂಟದಲ್ಲಿ ಬೆಳ್ಳಿ ಗೆದ್ದ ಸಂಹಿತಾಗೆ ಹುಟ್ಟೂರಲ್ಲಿ ಸ್ವಾಗತ, ಅಭಿನಂದನೆ

15/08/2022, 15:26

ಮಂಗಳೂರು(reporterkarnataka.com): ಮಲೇಷ್ಯಾ ಕೌಲಲಾಂಪುರದ ವಿಶ್ವ ಟೇಕ್ವಾಂಡೋ ಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಸಂಹಿತಾ ಅಲೆವೂರಾಯ ಅವರನ್ನು ಸೋಮವಾರ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ನಾಗರಿಕರ ಪರವಾಗಿ ಅಭಿನಂದಿಸಲಾಯಿತು. 

ನೇಪಾಳದಲ್ಲಿ  ನಡೆದ ವಿಶ್ವ ಟೇಕ್ವಾಂಡೋ ಕೂಟದಲ್ಲಿ ಚಿನ್ನ ಗಳಿಸಿದ್ದೆ. ಈ ಬಾರಿಯೂ ಚಿನ್ನದ ಪದಕ ನಿರೀಕ್ಷೆಯಲ್ಲಿದ್ದೆ. 20 ದೇಶಗಳ 50 ಸ್ಪರ್ಧಿಗಳು ಇದ್ದರು. ತೀವ್ರವಾದ ಸ್ಪರ್ಧೆ ಇತ್ತು, ಬೆಳ್ಳಿ ಪದಕದಿಂದ ಸಂತುಷ್ಟನಾಗಿದ್ದೇನೆ. ಶಾರದಾ ಕಾಲೇಜು, ಕೋಚ್‌ ಗುರುರಾಜ್‌, ನಿಖಿಲ್‌, ಕೃಷ್ಣ ಮತ್ತು ತಂದೆ ತಾಯಿಯ ಪ್ರೋತ್ಸಾಹದಿಂದ ಪದಕ ಗೆಲ್ಲಲು ಸಾಧ್ಯವಾಯಿತು ಎಂದು ಸಂಹಿತಾ ಅಲೆವೂರಾಯ ಹೇಳಿದರು. 


ಶಿವಳ್ಳಿ ಸ್ಪಂದನ ಅಧ್ಯಕ್ಷ ಕೆ.ಕೃಷ್ಣ ಭಟ್‌, ವಲಯಾಧ್ಯಕ್ಷ ರಾಮಚಂದ್ರ ಭಟ್‌ ಎಲ್ಲೂರು ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಧಾರ್ಮಿಕ ಪರಿಷತ್‌ ಸದಸ್ಯ ಗಿರಿಪ್ರಕಾಶ್‌ ತಂತ್ರಿ ಅಭಿನಂದಿಸಿದರು. ಹೆತ್ತವರಾದ ಕುಂಜತ್ತೋಡಿ ವಾಸುದೇವ ಭಟ್‌ ಮತ್ತು ದೀಪಾ ಕೆ.ಎಸ್.‌ ಮತ್ತು ಋತ್ವಿಕ್‌ ಅಲೆವೂರಾಯ ಇದ್ದರು. 

ಕಾಲೇಜಿನಲ್ಲಿ ಅಭಿನಂದನೆ: ಶಾರದಾ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಮೆರವಣಿಗೆಯಲ್ಲಿ ಕರೆತಂದು ಸನ್ಮಾನಿಸಲಾಯಿತು. ಶಾರದಾ ಕಾಲೇಜಿನ ಮುಖ್ಯಸ್ಥ ಎಂ.ಬಿ.ಪುರಾಣಿಕ್‌, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಯಕ್ಷಧ್ರುವ ಪಟ್ಲ ಫೌಂಡೇಶನ್‌ ಅಧ್ಯಕ್ಷ ಪುರುಷೋತ್ತಮ ಭಂಡಾರಿ ಅಡ್ಯಾರ್‌ ಇದ್ದರು.

ಬಳಿಕ ಕದ್ರಿ ಬಡಾವಣೆಯಲ್ಲಿ ಮಹಿಳಾ ಬಳಗದವರು ಸ್ವಾಗತಿಸಿ, ಪದಕ ಗೆದ್ದು ಊರಿಗೆ ಖ್ಯಾತಿ ತಂದ ಸಂಹಿತಾ ಅಲೆವುರಾಯ ಅವರಿಗೆ ಅಭಿನಂದಿಸಿ, ಜೈಕಾರ ಕೂಗಿದರು. 

ಇತ್ತೀಚಿನ ಸುದ್ದಿ

ಜಾಹೀರಾತು