5:39 AM Friday18 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ವಿಶ್ವ ಟೇಕ್ವಾಂಡೋ ಕೂಟದಲ್ಲಿ ಬೆಳ್ಳಿ ಗೆದ್ದ ಸಂಹಿತಾಗೆ ಹುಟ್ಟೂರಲ್ಲಿ ಸ್ವಾಗತ, ಅಭಿನಂದನೆ

15/08/2022, 15:26

ಮಂಗಳೂರು(reporterkarnataka.com): ಮಲೇಷ್ಯಾ ಕೌಲಲಾಂಪುರದ ವಿಶ್ವ ಟೇಕ್ವಾಂಡೋ ಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಸಂಹಿತಾ ಅಲೆವೂರಾಯ ಅವರನ್ನು ಸೋಮವಾರ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ನಾಗರಿಕರ ಪರವಾಗಿ ಅಭಿನಂದಿಸಲಾಯಿತು. 

ನೇಪಾಳದಲ್ಲಿ  ನಡೆದ ವಿಶ್ವ ಟೇಕ್ವಾಂಡೋ ಕೂಟದಲ್ಲಿ ಚಿನ್ನ ಗಳಿಸಿದ್ದೆ. ಈ ಬಾರಿಯೂ ಚಿನ್ನದ ಪದಕ ನಿರೀಕ್ಷೆಯಲ್ಲಿದ್ದೆ. 20 ದೇಶಗಳ 50 ಸ್ಪರ್ಧಿಗಳು ಇದ್ದರು. ತೀವ್ರವಾದ ಸ್ಪರ್ಧೆ ಇತ್ತು, ಬೆಳ್ಳಿ ಪದಕದಿಂದ ಸಂತುಷ್ಟನಾಗಿದ್ದೇನೆ. ಶಾರದಾ ಕಾಲೇಜು, ಕೋಚ್‌ ಗುರುರಾಜ್‌, ನಿಖಿಲ್‌, ಕೃಷ್ಣ ಮತ್ತು ತಂದೆ ತಾಯಿಯ ಪ್ರೋತ್ಸಾಹದಿಂದ ಪದಕ ಗೆಲ್ಲಲು ಸಾಧ್ಯವಾಯಿತು ಎಂದು ಸಂಹಿತಾ ಅಲೆವೂರಾಯ ಹೇಳಿದರು. 


ಶಿವಳ್ಳಿ ಸ್ಪಂದನ ಅಧ್ಯಕ್ಷ ಕೆ.ಕೃಷ್ಣ ಭಟ್‌, ವಲಯಾಧ್ಯಕ್ಷ ರಾಮಚಂದ್ರ ಭಟ್‌ ಎಲ್ಲೂರು ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಧಾರ್ಮಿಕ ಪರಿಷತ್‌ ಸದಸ್ಯ ಗಿರಿಪ್ರಕಾಶ್‌ ತಂತ್ರಿ ಅಭಿನಂದಿಸಿದರು. ಹೆತ್ತವರಾದ ಕುಂಜತ್ತೋಡಿ ವಾಸುದೇವ ಭಟ್‌ ಮತ್ತು ದೀಪಾ ಕೆ.ಎಸ್.‌ ಮತ್ತು ಋತ್ವಿಕ್‌ ಅಲೆವೂರಾಯ ಇದ್ದರು. 

ಕಾಲೇಜಿನಲ್ಲಿ ಅಭಿನಂದನೆ: ಶಾರದಾ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಮೆರವಣಿಗೆಯಲ್ಲಿ ಕರೆತಂದು ಸನ್ಮಾನಿಸಲಾಯಿತು. ಶಾರದಾ ಕಾಲೇಜಿನ ಮುಖ್ಯಸ್ಥ ಎಂ.ಬಿ.ಪುರಾಣಿಕ್‌, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಯಕ್ಷಧ್ರುವ ಪಟ್ಲ ಫೌಂಡೇಶನ್‌ ಅಧ್ಯಕ್ಷ ಪುರುಷೋತ್ತಮ ಭಂಡಾರಿ ಅಡ್ಯಾರ್‌ ಇದ್ದರು.

ಬಳಿಕ ಕದ್ರಿ ಬಡಾವಣೆಯಲ್ಲಿ ಮಹಿಳಾ ಬಳಗದವರು ಸ್ವಾಗತಿಸಿ, ಪದಕ ಗೆದ್ದು ಊರಿಗೆ ಖ್ಯಾತಿ ತಂದ ಸಂಹಿತಾ ಅಲೆವುರಾಯ ಅವರಿಗೆ ಅಭಿನಂದಿಸಿ, ಜೈಕಾರ ಕೂಗಿದರು. 

ಇತ್ತೀಚಿನ ಸುದ್ದಿ

ಜಾಹೀರಾತು