6:57 AM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ವಿಶ್ವ ಟೇಕ್ವಾಂಡೋ ಕೂಟದಲ್ಲಿ ಬೆಳ್ಳಿ ಗೆದ್ದ ಸಂಹಿತಾಗೆ ಹುಟ್ಟೂರಲ್ಲಿ ಸ್ವಾಗತ, ಅಭಿನಂದನೆ

15/08/2022, 15:26

ಮಂಗಳೂರು(reporterkarnataka.com): ಮಲೇಷ್ಯಾ ಕೌಲಲಾಂಪುರದ ವಿಶ್ವ ಟೇಕ್ವಾಂಡೋ ಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಸಂಹಿತಾ ಅಲೆವೂರಾಯ ಅವರನ್ನು ಸೋಮವಾರ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ನಾಗರಿಕರ ಪರವಾಗಿ ಅಭಿನಂದಿಸಲಾಯಿತು. 

ನೇಪಾಳದಲ್ಲಿ  ನಡೆದ ವಿಶ್ವ ಟೇಕ್ವಾಂಡೋ ಕೂಟದಲ್ಲಿ ಚಿನ್ನ ಗಳಿಸಿದ್ದೆ. ಈ ಬಾರಿಯೂ ಚಿನ್ನದ ಪದಕ ನಿರೀಕ್ಷೆಯಲ್ಲಿದ್ದೆ. 20 ದೇಶಗಳ 50 ಸ್ಪರ್ಧಿಗಳು ಇದ್ದರು. ತೀವ್ರವಾದ ಸ್ಪರ್ಧೆ ಇತ್ತು, ಬೆಳ್ಳಿ ಪದಕದಿಂದ ಸಂತುಷ್ಟನಾಗಿದ್ದೇನೆ. ಶಾರದಾ ಕಾಲೇಜು, ಕೋಚ್‌ ಗುರುರಾಜ್‌, ನಿಖಿಲ್‌, ಕೃಷ್ಣ ಮತ್ತು ತಂದೆ ತಾಯಿಯ ಪ್ರೋತ್ಸಾಹದಿಂದ ಪದಕ ಗೆಲ್ಲಲು ಸಾಧ್ಯವಾಯಿತು ಎಂದು ಸಂಹಿತಾ ಅಲೆವೂರಾಯ ಹೇಳಿದರು. 


ಶಿವಳ್ಳಿ ಸ್ಪಂದನ ಅಧ್ಯಕ್ಷ ಕೆ.ಕೃಷ್ಣ ಭಟ್‌, ವಲಯಾಧ್ಯಕ್ಷ ರಾಮಚಂದ್ರ ಭಟ್‌ ಎಲ್ಲೂರು ಸನ್ಮಾನಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಧಾರ್ಮಿಕ ಪರಿಷತ್‌ ಸದಸ್ಯ ಗಿರಿಪ್ರಕಾಶ್‌ ತಂತ್ರಿ ಅಭಿನಂದಿಸಿದರು. ಹೆತ್ತವರಾದ ಕುಂಜತ್ತೋಡಿ ವಾಸುದೇವ ಭಟ್‌ ಮತ್ತು ದೀಪಾ ಕೆ.ಎಸ್.‌ ಮತ್ತು ಋತ್ವಿಕ್‌ ಅಲೆವೂರಾಯ ಇದ್ದರು. 

ಕಾಲೇಜಿನಲ್ಲಿ ಅಭಿನಂದನೆ: ಶಾರದಾ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಮೆರವಣಿಗೆಯಲ್ಲಿ ಕರೆತಂದು ಸನ್ಮಾನಿಸಲಾಯಿತು. ಶಾರದಾ ಕಾಲೇಜಿನ ಮುಖ್ಯಸ್ಥ ಎಂ.ಬಿ.ಪುರಾಣಿಕ್‌, ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಯಕ್ಷಧ್ರುವ ಪಟ್ಲ ಫೌಂಡೇಶನ್‌ ಅಧ್ಯಕ್ಷ ಪುರುಷೋತ್ತಮ ಭಂಡಾರಿ ಅಡ್ಯಾರ್‌ ಇದ್ದರು.

ಬಳಿಕ ಕದ್ರಿ ಬಡಾವಣೆಯಲ್ಲಿ ಮಹಿಳಾ ಬಳಗದವರು ಸ್ವಾಗತಿಸಿ, ಪದಕ ಗೆದ್ದು ಊರಿಗೆ ಖ್ಯಾತಿ ತಂದ ಸಂಹಿತಾ ಅಲೆವುರಾಯ ಅವರಿಗೆ ಅಭಿನಂದಿಸಿ, ಜೈಕಾರ ಕೂಗಿದರು. 

ಇತ್ತೀಚಿನ ಸುದ್ದಿ

ಜಾಹೀರಾತು