6:24 AM Friday10 - July 2026
ಬ್ರೇಕಿಂಗ್ ನ್ಯೂಸ್
ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:…

ಇತ್ತೀಚಿನ ಸುದ್ದಿ

ವಿಕಲಚೇತನರಿಗೆ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸಿ: ಮೇಯರ್ ಮನೋಜ್ ಕುಮಾರ್

04/12/2024, 02:25

ಮಂಗಳೂರು(reporterkarnataka.com):ವಿಕಲಚೇತನರಿಗೆ ಸಿಗುವ ಸೌಲಭ್ಯಗಳನ್ನು ಅತ್ಯಂತ ಶೀಘ್ರ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮೇಯರ್ ಮನೋಜ್ ಕುಮಾರ್ ಹೇಳಿದರು.
ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಲಯನ್ಸ್ ಕ್ಲಬ್ ಗಾಂಧೀನಗರ, ಶಿಶು ಕೇಂದ್ರೀಕೃತ ಶಾಲೆಗಳ ಸಂಯುಕ್ರ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರಕಾರ, ಸ್ಥಳೀಯ ಸಂಸ್ಥೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳು ವಿಕಲಚೇತನರ ಸಬಲೀಕರಣಕ್ಕೆ ಹಲವಾರು ಸೌಲಭ್ಯಗಳನ್ನು ನೀಡುತ್ತಿವೆ. ಇವುಗಳಿಗೆ ಫಲಾನುಭವಿಗಳು ಅಲೆದಾಡುವಂತಾಗಬಾರದು. ಅರ್ಹರ ಮನೆ ಬಾಗಿಲಿಗೆ ತಲುಪಿಸಲು ಪ್ರಯತ್ನಿಸಬೇಕು ಎಂದು ಅವರು ಹೇಳಿದರು.
ಕರ್ನಾಟಕ ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಜಿ.ಪಂ. ಸಹಾಯಕ ಕಾರ್ಯದರ್ಶಿ ಸುಧೀರ್ ಗಾಂವ್ಕರ್ ಮಾತನಾಡಿದರು. ಉಪಮೇಯರ್ ಭಾನುಮತಿ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ನಗರ ಸಿಡಿಪಿಓ ಶ್ವೇತಾ, ಗ್ರಾಮಾಂತರ ಸಿಡಿಪಿಓ ಶೈಲಾ, ಗಣೇಶ್ ಶೆಟ್ಟಿ, ಮನೋಹರ್ ಉಳ್ಳಾಲ, ಅಶೋಕ್ ಪೈ ಮತ್ತಿತರರು ಇದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ರಶ್ಮಿ ಸ್ವಾಗತಿಸಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಹರೀಶ್ ವಂದಿಸಿದರು. ಡಾ.ವಸಂತ ಕುಮಾರ್ ಶೆಟ್ಟಿ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿವಿಧ ವಿಶೇಷ ಶಾಲೆಗಳ ವಿದ್ಯಾರ್ಥಿಗಳಾದ ಆಶೀರ್ವಾದ್ ಬಿ. ಶೆಟ್ಟಿ, ದೀಕ್ಷಿತಾ, ರೋಹಿತ್, ಯಶ್, ಭವ್ಯ ದೇವಾಡಿಗ, ಫಾತಿಮತುಲ್ ಅಫ್ರೀನಾ, ಕೀರ್ತಿಕಾ, ಪ್ರದೀಪ್, ಮುಸ್ತಫಾ, ಜ್ಯೋತಿ, ವರುಣ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.
ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಏರ್ಪಡಿಸಿದ ವಿಶೇಷ ಶಾಲಾ ಮಕ್ಕಳ ಕ್ರೀಡಾಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಾಧಕರಾದ ಅಬ್ದುಲ್ ಹಮೀದ್ ತುಂಬೆ, ದುರ್ಗಾಲಕ್ಷ್ಮೀ ಕಾವೂರು, ವಿಶ್ವನಾಥ ಶೆಟ್ಟಿಗಾರ್ ಅವರನ್ನು ಸನ್ಮಾನಿಸಲಾಯಿತು. ಹಿರಿಯ ನಾಗರೀಕರ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು