8:21 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆ: ನಕಲಿ ಟ್ರಸ್ಟ್ ಕಾರ್ಯಾಚರಣೆ; ಪೊಲೀಸರಿಗೆ ದೂರು

20/02/2024, 22:29

ಕೊಲ್ಲೂರು(reporterkarnataka.com): ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆಯೊಂದು ಬೆಳಕಿಗೆ ಬಂದಿದೆ. ಕೊಲ್ಲೂರು ಮೂಕಾಂಬಿಕೆ ದೇಗುಲದ ಹೆಸರಿನಲ್ಲಿ ನಕಲಿ ಟ್ರಸ್ಟ್‌ ರಚಿಸಿ ಹಣ ಸಂಗ್ರಹಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೇರಳ ಮತ್ತು ತಮಿಳುನಾಡಿನ ಮೂಕಾಂಬಿಕೆ ಭಕ್ತರನ್ನು ಟಾರ್ಗೆಟ್ ಮಾಡಿ ಈ ನಕಲಿ ಟ್ರಸ್ಟ್ ನ ಲಿಂಕ್ ಹರಿಯಬಿಡಲಾಗಿದೆ.
ದೇಗುಲಕ್ಕೆ ದೇಣಿಗೆ, ಹರಕೆ ಸಲ್ಲಿಸುವ ಭಕ್ತರು ಇದರಲ್ಲಿ ದುಡ್ಡು ಕಳುಹಿಸಬಹುದು ಎಂದು ನಮೂದಿಸಲಾಗಿದೆ. ಭಕ್ತರೊಬ್ಬರು ಹಣ ಕಳಿಸಿರುವ ಬಗ್ಗೆ ದೇಗುಲಕ್ಕೆ ಇ-ಮೇಲ್ ಮಾಡಿದಾಗ ಈ ಅಕೌಂಟ್‍ಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ಬಂದಿದೆ. ಈ ಟ್ರಸ್ಟ್ ವಿರುದ್ಧ ಈಗ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಕೇರಳದಲ್ಲಿ ಈ ಟ್ರಸ್ಟ್ ನೋಂದಣಿಯಾಗಿದೆ ಎನ್ನಲಾಗಿದೆ. ದೇಗುಲದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲಾಗುತ್ತಿದೆ. 2022ರಿಂದ ಈ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಗೆ ಮೋಸ ಮಾಡುಲಾಗುತ್ತಿದೆ ತಿಳಿದು ಬಂದಿದೆ. ಭಾರೀ ಮೊತ್ತದ ದುಡ್ಡು ಈ ಟ್ರಸ್ಟ್ ಲಪಟಾಯಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಮುಜರಾಯಿ ಇಲಾಖೆ ಸೂಕ್ತ ತನಿಖೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು