6:36 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆ: ನಕಲಿ ಟ್ರಸ್ಟ್ ಕಾರ್ಯಾಚರಣೆ; ಪೊಲೀಸರಿಗೆ ದೂರು

20/02/2024, 22:29

ಕೊಲ್ಲೂರು(reporterkarnataka.com): ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆಯೊಂದು ಬೆಳಕಿಗೆ ಬಂದಿದೆ. ಕೊಲ್ಲೂರು ಮೂಕಾಂಬಿಕೆ ದೇಗುಲದ ಹೆಸರಿನಲ್ಲಿ ನಕಲಿ ಟ್ರಸ್ಟ್‌ ರಚಿಸಿ ಹಣ ಸಂಗ್ರಹಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೇರಳ ಮತ್ತು ತಮಿಳುನಾಡಿನ ಮೂಕಾಂಬಿಕೆ ಭಕ್ತರನ್ನು ಟಾರ್ಗೆಟ್ ಮಾಡಿ ಈ ನಕಲಿ ಟ್ರಸ್ಟ್ ನ ಲಿಂಕ್ ಹರಿಯಬಿಡಲಾಗಿದೆ.
ದೇಗುಲಕ್ಕೆ ದೇಣಿಗೆ, ಹರಕೆ ಸಲ್ಲಿಸುವ ಭಕ್ತರು ಇದರಲ್ಲಿ ದುಡ್ಡು ಕಳುಹಿಸಬಹುದು ಎಂದು ನಮೂದಿಸಲಾಗಿದೆ. ಭಕ್ತರೊಬ್ಬರು ಹಣ ಕಳಿಸಿರುವ ಬಗ್ಗೆ ದೇಗುಲಕ್ಕೆ ಇ-ಮೇಲ್ ಮಾಡಿದಾಗ ಈ ಅಕೌಂಟ್‍ಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ಬಂದಿದೆ. ಈ ಟ್ರಸ್ಟ್ ವಿರುದ್ಧ ಈಗ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಕೇರಳದಲ್ಲಿ ಈ ಟ್ರಸ್ಟ್ ನೋಂದಣಿಯಾಗಿದೆ ಎನ್ನಲಾಗಿದೆ. ದೇಗುಲದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲಾಗುತ್ತಿದೆ. 2022ರಿಂದ ಈ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಗೆ ಮೋಸ ಮಾಡುಲಾಗುತ್ತಿದೆ ತಿಳಿದು ಬಂದಿದೆ. ಭಾರೀ ಮೊತ್ತದ ದುಡ್ಡು ಈ ಟ್ರಸ್ಟ್ ಲಪಟಾಯಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಮುಜರಾಯಿ ಇಲಾಖೆ ಸೂಕ್ತ ತನಿಖೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು