12:10 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆ: ನಕಲಿ ಟ್ರಸ್ಟ್ ಕಾರ್ಯಾಚರಣೆ; ಪೊಲೀಸರಿಗೆ ದೂರು

20/02/2024, 22:29

ಕೊಲ್ಲೂರು(reporterkarnataka.com): ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆಯೊಂದು ಬೆಳಕಿಗೆ ಬಂದಿದೆ. ಕೊಲ್ಲೂರು ಮೂಕಾಂಬಿಕೆ ದೇಗುಲದ ಹೆಸರಿನಲ್ಲಿ ನಕಲಿ ಟ್ರಸ್ಟ್‌ ರಚಿಸಿ ಹಣ ಸಂಗ್ರಹಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೇರಳ ಮತ್ತು ತಮಿಳುನಾಡಿನ ಮೂಕಾಂಬಿಕೆ ಭಕ್ತರನ್ನು ಟಾರ್ಗೆಟ್ ಮಾಡಿ ಈ ನಕಲಿ ಟ್ರಸ್ಟ್ ನ ಲಿಂಕ್ ಹರಿಯಬಿಡಲಾಗಿದೆ.
ದೇಗುಲಕ್ಕೆ ದೇಣಿಗೆ, ಹರಕೆ ಸಲ್ಲಿಸುವ ಭಕ್ತರು ಇದರಲ್ಲಿ ದುಡ್ಡು ಕಳುಹಿಸಬಹುದು ಎಂದು ನಮೂದಿಸಲಾಗಿದೆ. ಭಕ್ತರೊಬ್ಬರು ಹಣ ಕಳಿಸಿರುವ ಬಗ್ಗೆ ದೇಗುಲಕ್ಕೆ ಇ-ಮೇಲ್ ಮಾಡಿದಾಗ ಈ ಅಕೌಂಟ್‍ಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ಬಂದಿದೆ. ಈ ಟ್ರಸ್ಟ್ ವಿರುದ್ಧ ಈಗ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಕೇರಳದಲ್ಲಿ ಈ ಟ್ರಸ್ಟ್ ನೋಂದಣಿಯಾಗಿದೆ ಎನ್ನಲಾಗಿದೆ. ದೇಗುಲದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲಾಗುತ್ತಿದೆ. 2022ರಿಂದ ಈ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಗೆ ಮೋಸ ಮಾಡುಲಾಗುತ್ತಿದೆ ತಿಳಿದು ಬಂದಿದೆ. ಭಾರೀ ಮೊತ್ತದ ದುಡ್ಡು ಈ ಟ್ರಸ್ಟ್ ಲಪಟಾಯಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಮುಜರಾಯಿ ಇಲಾಖೆ ಸೂಕ್ತ ತನಿಖೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು