9:43 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಮೈಸೂರು ದಸರಾ ಗಜ ಪಯಣಕ್ಕೆ ಚಾಲನೆ: ವರುಣನ ಸಿಂಚನದೊಂದಿಗೆ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು ತಂಡ

07/08/2022, 12:58

ರಾಜೇಶ್ವರಿ ರಾವ್ ಹುಣಸೂರು ಮೈಸೂರು

info.reporterkarnataka@gmail.com

ವಿಶ್ವವಿಖ್ಯಾತ ಮೈಸೂರು ದಸರಾಗೆ ಮುನ್ನುಡಿಯಾ ಗಜಪಯಣಕ್ಕೆ ಭಾನುವಾರ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಚಾಲನೆ ನೀಡಲಾಯಿತು.

ವೀರನಹೊಸಹಳ್ಳಿ ಗ್ರಾಮದಲ್ಲಿ ಬೆಳಗ್ಗೆ 9.01ರಿಂದ 9.35ರ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಪೂಜೆ ಸಲ್ಲಿಸುವುದರ ಮೂಲಕ ಗಜಪಯಣಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಸರಕಾರದ ಪರವಾಗಿ ಚಾಲನೆ ನೀಡಿದರು. 

ಅಭಿಮನ್ಯು, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಚೈತ್ರಾ, ಗೋಪಾಲಸ್ವಾಮಿ, ಕಾವೇರಿ, ಲಕ್ಷ್ಮೀ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಲಾಯಿತು. ಕಲಾ ತಂಡಗಳು, ಮಂಗಳವಾದ್ಯದೊಂದಿಗೆ ವರುಣನ ಸಿಂಚನದ ನಡುವೆ ಗಜಪಡೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿದವು.

ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಗಜಪಯಣಕ್ಕೆ ಇಂದು ವಿಜೃಂಭಣೆಯಿಂದ ಚಾಲನೆ ನೀಡಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ನೇತೃತ್ವದಲ್ಲಿ ಆನೆಗಳನ್ನು ಮೈಸೂರಿಗೆ ಕರೆತರುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಆ.10ರಂದು ಅರಮನೆಗೆ ಗಜ ಪಡೆಯ ಆಗಮನವಾಗಲಿದೆ. ಅಂದು ಬೆಳಗ್ಗೆ 9.20ರಿಂದ 10.00ರ ಕನ್ಯಾ ಲಗ್ನದಲ್ಲಿ ಗಜಪಡೆಯನ್ನು ಬರಮಾಡಿಕೊಳ್ಳಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು