12:42 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ನಡಿಗೆ ತಾಲೀಮು ಆರಂಭ; ಕ್ಯಾಪ್ಟನ್ ಅಭಿಮನ್ಯು ನೇತೃತ್ವ

14/08/2022, 20:16

ಮೈಸೂರು(reporterkarnataka.com): ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನಲೆಯಲ್ಲಿ ಭಾನುವಾರದಿಂದ ದಸರಾ ಗಜಪಡೆಗೆ ತಾಲೀಮು ಆರಂಭಿಸಲಾಯಿತು. ಮೈಸೂರು ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಪ್ರತಿದಿನ ಬೆಳಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ. ಅಂತೆಯೇ ಇಂದು ತಾಲೀಮು ಆರಂಭಕ್ಕೂ ಮುನ್ನ ಅರಮನೆ ಅವರಣದಲ್ಲಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕೋರೋನಾ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಆನೆಗಳು ಅರಮನೆ ಆವರಣದಲ್ಲಿಯೇ ತಾಲೀಮು ನಡೆಸಲಾಗಿತ್ತು. ಎರಡು ವರ್ಷಗಳ ನಂತರ ಮತ್ತೆ ಎಂದಿನಂತೆ ಅರಮನೆಯಿಂದ ಬನ್ನಿ ಮಂಟಪದವರೆಗೆ ಗಜಪಡೆಗಳು ವಾಯುವಿಹಾರಕ್ಕೆ ತೆರಳುತ್ತಿವೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆಯಿಂದ ಹೊರಟು ಕೆ.ಆರ್. ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದಿಕ್ ಸರ್ಕಲ್, ಬಂಬೂ ಬಜಾರ್ ರಸ್ತೆ ಮೂಲಕ ಬನ್ನಿ ಮಂಟಪ ತಲುಪುತ್ತದೆ. ಮತ್ತೆ ಬನ್ನಿ ಮಂಟಪದಿಂದ ಅರಮನೆಗೆ ವಾಪಾಸ್ ಆಗಲಿವೆ.

ಈ ವೇಳೆ ಡಿಸಿಎಫ್ ಕರಿಕಾಳನ್ ಮಾತನಾಡಿ, ದಸರಾ ಮಹೋತ್ಸವ ಹಿನ್ನಲೆಯಲ್ಲಿ ಆನೆಗಳಿಗೆ ಇಂದಿನಿಂದ ತಾಲೀಮು ಪ್ರಾರಂಭ ಮಾಡಲಾಗಿದೆ. ಆನೆಗಳನ್ನು ತೂಕ ಮಾಡಲಾಗಿದೆ, ಎಲ್ಲ ಆನೆಗಳು ಅರೋಗ್ಯವಾಗಿದೆ. ಮತ್ತೊಂದು ವಿಶೇಷವೆನೆಂದರೆ ನಗರ ವಾತಾವರಣಕ್ಕೆ ಆನೆಗಳು ಹೊಂದಿಕೊಂಡಿದೆ. ಒಂದು ವಾರದ ನಂತರ ಭಾರ ಹೊರುವ ತಾಲೀಮು ಪ್ರಾರಂಭ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು