1:50 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ನಡಿಗೆ ತಾಲೀಮು ಆರಂಭ; ಕ್ಯಾಪ್ಟನ್ ಅಭಿಮನ್ಯು ನೇತೃತ್ವ

14/08/2022, 20:16

ಮೈಸೂರು(reporterkarnataka.com): ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಹಿನ್ನಲೆಯಲ್ಲಿ ಭಾನುವಾರದಿಂದ ದಸರಾ ಗಜಪಡೆಗೆ ತಾಲೀಮು ಆರಂಭಿಸಲಾಯಿತು. ಮೈಸೂರು ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಪ್ರತಿದಿನ ಬೆಳಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ. ಅಂತೆಯೇ ಇಂದು ತಾಲೀಮು ಆರಂಭಕ್ಕೂ ಮುನ್ನ ಅರಮನೆ ಅವರಣದಲ್ಲಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

ಕೋರೋನಾ ಹಿನ್ನೆಲೆ ಕಳೆದ ಎರಡು ವರ್ಷಗಳಿಂದ ಆನೆಗಳು ಅರಮನೆ ಆವರಣದಲ್ಲಿಯೇ ತಾಲೀಮು ನಡೆಸಲಾಗಿತ್ತು. ಎರಡು ವರ್ಷಗಳ ನಂತರ ಮತ್ತೆ ಎಂದಿನಂತೆ ಅರಮನೆಯಿಂದ ಬನ್ನಿ ಮಂಟಪದವರೆಗೆ ಗಜಪಡೆಗಳು ವಾಯುವಿಹಾರಕ್ಕೆ ತೆರಳುತ್ತಿವೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆಯಿಂದ ಹೊರಟು ಕೆ.ಆರ್. ಸರ್ಕಲ್, ಸಯ್ಯಾಜಿ ರಾವ್ ರಸ್ತೆ, ಆಯುರ್ವೇದಿಕ್ ಸರ್ಕಲ್, ಬಂಬೂ ಬಜಾರ್ ರಸ್ತೆ ಮೂಲಕ ಬನ್ನಿ ಮಂಟಪ ತಲುಪುತ್ತದೆ. ಮತ್ತೆ ಬನ್ನಿ ಮಂಟಪದಿಂದ ಅರಮನೆಗೆ ವಾಪಾಸ್ ಆಗಲಿವೆ.

ಈ ವೇಳೆ ಡಿಸಿಎಫ್ ಕರಿಕಾಳನ್ ಮಾತನಾಡಿ, ದಸರಾ ಮಹೋತ್ಸವ ಹಿನ್ನಲೆಯಲ್ಲಿ ಆನೆಗಳಿಗೆ ಇಂದಿನಿಂದ ತಾಲೀಮು ಪ್ರಾರಂಭ ಮಾಡಲಾಗಿದೆ. ಆನೆಗಳನ್ನು ತೂಕ ಮಾಡಲಾಗಿದೆ, ಎಲ್ಲ ಆನೆಗಳು ಅರೋಗ್ಯವಾಗಿದೆ. ಮತ್ತೊಂದು ವಿಶೇಷವೆನೆಂದರೆ ನಗರ ವಾತಾವರಣಕ್ಕೆ ಆನೆಗಳು ಹೊಂದಿಕೊಂಡಿದೆ. ಒಂದು ವಾರದ ನಂತರ ಭಾರ ಹೊರುವ ತಾಲೀಮು ಪ್ರಾರಂಭ ಮಾಡಲಾಗುತ್ತೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು