6:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಮೈಸೂರು ದಸರಾ ಗಜ ಪಯಣಕ್ಕೆ ಚಾಲನೆ: ವರುಣನ ಸಿಂಚನದೊಂದಿಗೆ ಹೆಜ್ಜೆ ಹಾಕಿದ ಕ್ಯಾಪ್ಟನ್ ಅಭಿಮನ್ಯು ತಂಡ

07/08/2022, 12:58

ರಾಜೇಶ್ವರಿ ರಾವ್ ಹುಣಸೂರು ಮೈಸೂರು

info.reporterkarnataka@gmail.com

ವಿಶ್ವವಿಖ್ಯಾತ ಮೈಸೂರು ದಸರಾಗೆ ಮುನ್ನುಡಿಯಾ ಗಜಪಯಣಕ್ಕೆ ಭಾನುವಾರ ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಚಾಲನೆ ನೀಡಲಾಯಿತು.

ವೀರನಹೊಸಹಳ್ಳಿ ಗ್ರಾಮದಲ್ಲಿ ಬೆಳಗ್ಗೆ 9.01ರಿಂದ 9.35ರ ಕನ್ಯಾ ಲಗ್ನದಲ್ಲಿ ಸಾಂಪ್ರದಾಯಿಕವಾಗಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಪೂಜೆ ಸಲ್ಲಿಸುವುದರ ಮೂಲಕ ಗಜಪಯಣಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಸರಕಾರದ ಪರವಾಗಿ ಚಾಲನೆ ನೀಡಿದರು. 

ಅಭಿಮನ್ಯು, ಅರ್ಜುನ, ಧನಂಜಯ, ಮಹೇಂದ್ರ, ಭೀಮ, ಚೈತ್ರಾ, ಗೋಪಾಲಸ್ವಾಮಿ, ಕಾವೇರಿ, ಲಕ್ಷ್ಮೀ ಆನೆಗಳಿಗೆ ಪುಷ್ಪಾರ್ಚನೆ ಮಾಡಿ, ಫಲತಾಂಬೂಲ ನೀಡಲಾಯಿತು. ಕಲಾ ತಂಡಗಳು, ಮಂಗಳವಾದ್ಯದೊಂದಿಗೆ ವರುಣನ ಸಿಂಚನದ ನಡುವೆ ಗಜಪಡೆಗಳು ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಿದವು.

ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವ ಎಸ್.ಟಿ.ಸೋಮಶೇಖರ್, ಗಜಪಯಣಕ್ಕೆ ಇಂದು ವಿಜೃಂಭಣೆಯಿಂದ ಚಾಲನೆ ನೀಡಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ನೇತೃತ್ವದಲ್ಲಿ ಆನೆಗಳನ್ನು ಮೈಸೂರಿಗೆ ಕರೆತರುವ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಆ.10ರಂದು ಅರಮನೆಗೆ ಗಜ ಪಡೆಯ ಆಗಮನವಾಗಲಿದೆ. ಅಂದು ಬೆಳಗ್ಗೆ 9.20ರಿಂದ 10.00ರ ಕನ್ಯಾ ಲಗ್ನದಲ್ಲಿ ಗಜಪಡೆಯನ್ನು ಬರಮಾಡಿಕೊಳ್ಳಲಾಗುತ್ತದೆ.

ಇತ್ತೀಚಿನ ಸುದ್ದಿ

ಜಾಹೀರಾತು