3:18 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ವಿಶ್ವಕರ್ಮ ಸಮಾಜಕ್ಕೆ ಅವಮಾನ ಮಾಡುವಂತಹ ವಿಡಿಯೋ ಶೇರ್ ಮಾಡಿದ ಮಹಿಳೆ : ದೂರು ನೀಡಿದ ವಿವಿಧ ವಿಶ್ವಕರ್ಮ ಸಂಘಟನೆಗಳು

16/08/2021, 14:43

ಮಂಗಳೂರು(Reporterkarnataka.com)

ವಿಶ್ವಕರ್ಮ ಸಮಾಜದ ಮರದ ಕೆಲಸ ಮಾಡುವವರನ್ನು ಅವಹೇಳನ‌ ಮಾಡುವ ರೀತಿಯಲ್ಲಿ “ಕೆಲಸ ದಾಂತಿನ ಆಚಾರಿ ಬಾಲೆದ *** ಕೆತ್ತಿಯೆ” ಎನ್ನುವ ಮಾತನ್ನು ಅಳವಡಿಸಿದ ವಿಡಿಯೋ ತಯಾರಿಸಿ ಮಂಗಳೂರು ಸುರತ್ಕಲ್‌ನ ಸುಷ್ಮಾ ಎನ್ನುವವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದು, ಆದ್ದರಿಂದ ಸಮುದಾಯಕ್ಕೆ ಮಾನಸಿಕವಾಗಿ ಹಾಗೂ ಸಾಮಾಜಿಕವಾಗಿ ಅವಮಾನ ಉಂಟಾಗಿದೆ ಎಂದು ಮೂಡಬಿದ್ರಿ ವಿಶ್ವಕರ್ಮ ಜಾಗೃತದಳ ಮೂಡಬಿದ್ರಿ ಪೋಲಿಸ್ ಠಾಣೆಗೆ ದೂರು ನೀಡಿದೆ.

ಸೋಷಿಯಲ್ ಮಿಡಿಯಾ (Instrgram) ಪೇಜ್‌ನಲ್ಲಿ ವಿಶ್ವಕರ್ಮ ಸಮಾಜವನ್ನು ದುರ್ಬಳಕೆ ಮಾಡಿ ಜಾತಿ ನಿಂದನೆ ಮಾಡಿದ ಅರೋಪದಡಿ ಸುರತ್ಕಲ್ ಕ್ರಷ್ಣಾಪುರ ನಿವಾಸಿ “ಸುಷ್ಮಾ” ಎಂಬವರ ವಿರುದ್ಧ ಕಾನೂನು ರೀತಿಯಲ್ಲಿ ಶಿಕ್ಷೆಯಾಗಬೇಕೆಂದು ಮೂಡುಬಿದಿರೆ ವಿಶ್ವಕರ್ಮ ಜಾಗ್ರತದಳ , ಶ್ರೀ ಕಾಳಿಕಾಂಬಾ ಸೇವಾ ಸಮಿತಿ , ಕಾಷ್ಠ ಶಿಲ್ಪ , ಚಿನ್ನದ ಕೆಲಸಗಾರರ ಸಂಘ ದೂರಿನಲ್ಲಿ ತಿಳಿಸಿದೆ.

ವಿಶ್ವಕರ್ಮ ಒಕ್ಕೂಟದ ವತಿಯಿಂದ ಉಡುಪಿ ಸೆನ್ ಪೋಲಿಸ್ ಠಾಣೆಯಲ್ಲಿ ಸುಷ್ಮಾ ಮಯ್ಯ ವಿರುದ್ಧ ದೂರು ದಾಖಲಿಸಲಾಯ್ತು. ಈ ಸಂದರ್ಭದಲ್ಲಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಮಧು ಆಚಾರ್ಯ, ಪ್ರಧಾನ ಕಾರ್ಯದರ್ಶಿ ಮುರಳೀಧರ, ಅಲೆವೂರು ಯೋಗೀಶ ಆಚಾರ್, ಸತೀಶ್ ಆಚಾರ್ಯ ಪಡುಬಿದ್ರಿ,ಕಾಪು ವಿಶ್ವಕರ್ಮ ಯುವ ಸಂಘಟನೆ ಅಧ್ಯಕ್ಷರಾದ ಬಿಳಿಯಾರು ಸುಧಾಕರ ಆಚಾರ್ಯ, ಕಾರ್ಯದರ್ಶಿ ರತ್ನಾಕರ ಆಚಾರ್ಯ, ಹರೀಶ ಆಚಾರ್ಯ ಕಳತ್ತೂರು, ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಕಿಶೋರ್ ಆಚಾರ್ಯ, ವಿಶ್ವನಾಥ ಆಚಾರ್ಯ ಕಿದಿಯೂರು, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು