9:55 AM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ವಿಶ್ವಕರ್ಮ ಸಮಾಜಕ್ಕೆ ಅವಮಾನ ಮಾಡುವಂತಹ ವಿಡಿಯೋ ಶೇರ್ ಮಾಡಿದ ಮಹಿಳೆ : ದೂರು ನೀಡಿದ ವಿವಿಧ ವಿಶ್ವಕರ್ಮ ಸಂಘಟನೆಗಳು

16/08/2021, 14:43

ಮಂಗಳೂರು(Reporterkarnataka.com)

ವಿಶ್ವಕರ್ಮ ಸಮಾಜದ ಮರದ ಕೆಲಸ ಮಾಡುವವರನ್ನು ಅವಹೇಳನ‌ ಮಾಡುವ ರೀತಿಯಲ್ಲಿ “ಕೆಲಸ ದಾಂತಿನ ಆಚಾರಿ ಬಾಲೆದ *** ಕೆತ್ತಿಯೆ” ಎನ್ನುವ ಮಾತನ್ನು ಅಳವಡಿಸಿದ ವಿಡಿಯೋ ತಯಾರಿಸಿ ಮಂಗಳೂರು ಸುರತ್ಕಲ್‌ನ ಸುಷ್ಮಾ ಎನ್ನುವವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದು, ಆದ್ದರಿಂದ ಸಮುದಾಯಕ್ಕೆ ಮಾನಸಿಕವಾಗಿ ಹಾಗೂ ಸಾಮಾಜಿಕವಾಗಿ ಅವಮಾನ ಉಂಟಾಗಿದೆ ಎಂದು ಮೂಡಬಿದ್ರಿ ವಿಶ್ವಕರ್ಮ ಜಾಗೃತದಳ ಮೂಡಬಿದ್ರಿ ಪೋಲಿಸ್ ಠಾಣೆಗೆ ದೂರು ನೀಡಿದೆ.

ಸೋಷಿಯಲ್ ಮಿಡಿಯಾ (Instrgram) ಪೇಜ್‌ನಲ್ಲಿ ವಿಶ್ವಕರ್ಮ ಸಮಾಜವನ್ನು ದುರ್ಬಳಕೆ ಮಾಡಿ ಜಾತಿ ನಿಂದನೆ ಮಾಡಿದ ಅರೋಪದಡಿ ಸುರತ್ಕಲ್ ಕ್ರಷ್ಣಾಪುರ ನಿವಾಸಿ “ಸುಷ್ಮಾ” ಎಂಬವರ ವಿರುದ್ಧ ಕಾನೂನು ರೀತಿಯಲ್ಲಿ ಶಿಕ್ಷೆಯಾಗಬೇಕೆಂದು ಮೂಡುಬಿದಿರೆ ವಿಶ್ವಕರ್ಮ ಜಾಗ್ರತದಳ , ಶ್ರೀ ಕಾಳಿಕಾಂಬಾ ಸೇವಾ ಸಮಿತಿ , ಕಾಷ್ಠ ಶಿಲ್ಪ , ಚಿನ್ನದ ಕೆಲಸಗಾರರ ಸಂಘ ದೂರಿನಲ್ಲಿ ತಿಳಿಸಿದೆ.

ವಿಶ್ವಕರ್ಮ ಒಕ್ಕೂಟದ ವತಿಯಿಂದ ಉಡುಪಿ ಸೆನ್ ಪೋಲಿಸ್ ಠಾಣೆಯಲ್ಲಿ ಸುಷ್ಮಾ ಮಯ್ಯ ವಿರುದ್ಧ ದೂರು ದಾಖಲಿಸಲಾಯ್ತು. ಈ ಸಂದರ್ಭದಲ್ಲಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಮಧು ಆಚಾರ್ಯ, ಪ್ರಧಾನ ಕಾರ್ಯದರ್ಶಿ ಮುರಳೀಧರ, ಅಲೆವೂರು ಯೋಗೀಶ ಆಚಾರ್, ಸತೀಶ್ ಆಚಾರ್ಯ ಪಡುಬಿದ್ರಿ,ಕಾಪು ವಿಶ್ವಕರ್ಮ ಯುವ ಸಂಘಟನೆ ಅಧ್ಯಕ್ಷರಾದ ಬಿಳಿಯಾರು ಸುಧಾಕರ ಆಚಾರ್ಯ, ಕಾರ್ಯದರ್ಶಿ ರತ್ನಾಕರ ಆಚಾರ್ಯ, ಹರೀಶ ಆಚಾರ್ಯ ಕಳತ್ತೂರು, ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಕಿಶೋರ್ ಆಚಾರ್ಯ, ವಿಶ್ವನಾಥ ಆಚಾರ್ಯ ಕಿದಿಯೂರು, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು