11:37 PM Friday6 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ವಿಶ್ವಕರ್ಮ ಸಮಾಜಕ್ಕೆ ಅವಮಾನ ಮಾಡುವಂತಹ ವಿಡಿಯೋ ಶೇರ್ ಮಾಡಿದ ಮಹಿಳೆ : ದೂರು ನೀಡಿದ ವಿವಿಧ ವಿಶ್ವಕರ್ಮ ಸಂಘಟನೆಗಳು

16/08/2021, 14:43

ಮಂಗಳೂರು(Reporterkarnataka.com)

ವಿಶ್ವಕರ್ಮ ಸಮಾಜದ ಮರದ ಕೆಲಸ ಮಾಡುವವರನ್ನು ಅವಹೇಳನ‌ ಮಾಡುವ ರೀತಿಯಲ್ಲಿ “ಕೆಲಸ ದಾಂತಿನ ಆಚಾರಿ ಬಾಲೆದ *** ಕೆತ್ತಿಯೆ” ಎನ್ನುವ ಮಾತನ್ನು ಅಳವಡಿಸಿದ ವಿಡಿಯೋ ತಯಾರಿಸಿ ಮಂಗಳೂರು ಸುರತ್ಕಲ್‌ನ ಸುಷ್ಮಾ ಎನ್ನುವವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದು, ಆದ್ದರಿಂದ ಸಮುದಾಯಕ್ಕೆ ಮಾನಸಿಕವಾಗಿ ಹಾಗೂ ಸಾಮಾಜಿಕವಾಗಿ ಅವಮಾನ ಉಂಟಾಗಿದೆ ಎಂದು ಮೂಡಬಿದ್ರಿ ವಿಶ್ವಕರ್ಮ ಜಾಗೃತದಳ ಮೂಡಬಿದ್ರಿ ಪೋಲಿಸ್ ಠಾಣೆಗೆ ದೂರು ನೀಡಿದೆ.

ಸೋಷಿಯಲ್ ಮಿಡಿಯಾ (Instrgram) ಪೇಜ್‌ನಲ್ಲಿ ವಿಶ್ವಕರ್ಮ ಸಮಾಜವನ್ನು ದುರ್ಬಳಕೆ ಮಾಡಿ ಜಾತಿ ನಿಂದನೆ ಮಾಡಿದ ಅರೋಪದಡಿ ಸುರತ್ಕಲ್ ಕ್ರಷ್ಣಾಪುರ ನಿವಾಸಿ “ಸುಷ್ಮಾ” ಎಂಬವರ ವಿರುದ್ಧ ಕಾನೂನು ರೀತಿಯಲ್ಲಿ ಶಿಕ್ಷೆಯಾಗಬೇಕೆಂದು ಮೂಡುಬಿದಿರೆ ವಿಶ್ವಕರ್ಮ ಜಾಗ್ರತದಳ , ಶ್ರೀ ಕಾಳಿಕಾಂಬಾ ಸೇವಾ ಸಮಿತಿ , ಕಾಷ್ಠ ಶಿಲ್ಪ , ಚಿನ್ನದ ಕೆಲಸಗಾರರ ಸಂಘ ದೂರಿನಲ್ಲಿ ತಿಳಿಸಿದೆ.

ವಿಶ್ವಕರ್ಮ ಒಕ್ಕೂಟದ ವತಿಯಿಂದ ಉಡುಪಿ ಸೆನ್ ಪೋಲಿಸ್ ಠಾಣೆಯಲ್ಲಿ ಸುಷ್ಮಾ ಮಯ್ಯ ವಿರುದ್ಧ ದೂರು ದಾಖಲಿಸಲಾಯ್ತು. ಈ ಸಂದರ್ಭದಲ್ಲಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಮಧು ಆಚಾರ್ಯ, ಪ್ರಧಾನ ಕಾರ್ಯದರ್ಶಿ ಮುರಳೀಧರ, ಅಲೆವೂರು ಯೋಗೀಶ ಆಚಾರ್, ಸತೀಶ್ ಆಚಾರ್ಯ ಪಡುಬಿದ್ರಿ,ಕಾಪು ವಿಶ್ವಕರ್ಮ ಯುವ ಸಂಘಟನೆ ಅಧ್ಯಕ್ಷರಾದ ಬಿಳಿಯಾರು ಸುಧಾಕರ ಆಚಾರ್ಯ, ಕಾರ್ಯದರ್ಶಿ ರತ್ನಾಕರ ಆಚಾರ್ಯ, ಹರೀಶ ಆಚಾರ್ಯ ಕಳತ್ತೂರು, ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಕಿಶೋರ್ ಆಚಾರ್ಯ, ವಿಶ್ವನಾಥ ಆಚಾರ್ಯ ಕಿದಿಯೂರು, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು