8:28 AM Tuesday19 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ವಿಶ್ವಕರ್ಮ ಸಮಾಜಕ್ಕೆ ಅವಮಾನ ಮಾಡುವಂತಹ ವಿಡಿಯೋ ಶೇರ್ ಮಾಡಿದ ಮಹಿಳೆ : ದೂರು ನೀಡಿದ ವಿವಿಧ ವಿಶ್ವಕರ್ಮ ಸಂಘಟನೆಗಳು

16/08/2021, 14:43

ಮಂಗಳೂರು(Reporterkarnataka.com)

ವಿಶ್ವಕರ್ಮ ಸಮಾಜದ ಮರದ ಕೆಲಸ ಮಾಡುವವರನ್ನು ಅವಹೇಳನ‌ ಮಾಡುವ ರೀತಿಯಲ್ಲಿ “ಕೆಲಸ ದಾಂತಿನ ಆಚಾರಿ ಬಾಲೆದ *** ಕೆತ್ತಿಯೆ” ಎನ್ನುವ ಮಾತನ್ನು ಅಳವಡಿಸಿದ ವಿಡಿಯೋ ತಯಾರಿಸಿ ಮಂಗಳೂರು ಸುರತ್ಕಲ್‌ನ ಸುಷ್ಮಾ ಎನ್ನುವವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದು, ಆದ್ದರಿಂದ ಸಮುದಾಯಕ್ಕೆ ಮಾನಸಿಕವಾಗಿ ಹಾಗೂ ಸಾಮಾಜಿಕವಾಗಿ ಅವಮಾನ ಉಂಟಾಗಿದೆ ಎಂದು ಮೂಡಬಿದ್ರಿ ವಿಶ್ವಕರ್ಮ ಜಾಗೃತದಳ ಮೂಡಬಿದ್ರಿ ಪೋಲಿಸ್ ಠಾಣೆಗೆ ದೂರು ನೀಡಿದೆ.

ಸೋಷಿಯಲ್ ಮಿಡಿಯಾ (Instrgram) ಪೇಜ್‌ನಲ್ಲಿ ವಿಶ್ವಕರ್ಮ ಸಮಾಜವನ್ನು ದುರ್ಬಳಕೆ ಮಾಡಿ ಜಾತಿ ನಿಂದನೆ ಮಾಡಿದ ಅರೋಪದಡಿ ಸುರತ್ಕಲ್ ಕ್ರಷ್ಣಾಪುರ ನಿವಾಸಿ “ಸುಷ್ಮಾ” ಎಂಬವರ ವಿರುದ್ಧ ಕಾನೂನು ರೀತಿಯಲ್ಲಿ ಶಿಕ್ಷೆಯಾಗಬೇಕೆಂದು ಮೂಡುಬಿದಿರೆ ವಿಶ್ವಕರ್ಮ ಜಾಗ್ರತದಳ , ಶ್ರೀ ಕಾಳಿಕಾಂಬಾ ಸೇವಾ ಸಮಿತಿ , ಕಾಷ್ಠ ಶಿಲ್ಪ , ಚಿನ್ನದ ಕೆಲಸಗಾರರ ಸಂಘ ದೂರಿನಲ್ಲಿ ತಿಳಿಸಿದೆ.

ವಿಶ್ವಕರ್ಮ ಒಕ್ಕೂಟದ ವತಿಯಿಂದ ಉಡುಪಿ ಸೆನ್ ಪೋಲಿಸ್ ಠಾಣೆಯಲ್ಲಿ ಸುಷ್ಮಾ ಮಯ್ಯ ವಿರುದ್ಧ ದೂರು ದಾಖಲಿಸಲಾಯ್ತು. ಈ ಸಂದರ್ಭದಲ್ಲಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಮಧು ಆಚಾರ್ಯ, ಪ್ರಧಾನ ಕಾರ್ಯದರ್ಶಿ ಮುರಳೀಧರ, ಅಲೆವೂರು ಯೋಗೀಶ ಆಚಾರ್, ಸತೀಶ್ ಆಚಾರ್ಯ ಪಡುಬಿದ್ರಿ,ಕಾಪು ವಿಶ್ವಕರ್ಮ ಯುವ ಸಂಘಟನೆ ಅಧ್ಯಕ್ಷರಾದ ಬಿಳಿಯಾರು ಸುಧಾಕರ ಆಚಾರ್ಯ, ಕಾರ್ಯದರ್ಶಿ ರತ್ನಾಕರ ಆಚಾರ್ಯ, ಹರೀಶ ಆಚಾರ್ಯ ಕಳತ್ತೂರು, ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಕಿಶೋರ್ ಆಚಾರ್ಯ, ವಿಶ್ವನಾಥ ಆಚಾರ್ಯ ಕಿದಿಯೂರು, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು