7:01 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ವಿಶ್ವಕರ್ಮ ಸಮಾಜವು ಸಂಘಟನಾತ್ಮಕವಾಗಿ ಒಗ್ಗೂಡಲು ಆದ್ಯತೆ ಕೊಡಿ: ಕೃಷ್ಣಚಾರ್

18/09/2021, 08:51

ವಿಶ್ವಕರ್ಮ ಸಮಾಜವು ಸಂಘಟನಾತ್ಮಕವಾಗಿ ಒಗ್ಗೂಡಲು ಆದ್ಯತೆ ಕೊಡಿ: ಕೃಷ್ಣಚಾರ್

info.reporterkarnataka@gmail.com

ವಿಶ್ವಕರ್ಮ ಸಮುದಾಯವು ಸಂಘಟನಾತ್ಮಕವಾಗಿ ಬೆಳೆಯಲು ಹಾಗೂ ನಮ್ಮ ಸಮುದಾಯವನ್ನು ಗುರುತಿಸಿ ಅಭಿವೃದ್ಧಿಯತ್ತ ಕೊಂಡೊಯ್ಯಲು ಒಗ್ಗಟ್ಟಿನ ಅಗತ್ಯವಿದೆ. ಒಗ್ಗಟ್ಟು ಇದ್ದರೆ ಅಭಿವೃದ್ಧಿಯತ್ತ ಸಾಗಲು ಸಾಧ್ಯವೆಂದು ನಾಗಮಂಗಲ ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಕೃಷ್ಣಚಾರ್ ಹೇಳಿದರು.

ಅವರು ನಾಗಮಂಗಲ ತಾಲೂಕು ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೇವಲ ಕುಸುರಿ ಕೆಲಸವಷ್ಟೇ ಅಲ್ಲದೆ ತಮ್ಮಗಳ ಹಾಗೂ ಸಮುದಾಯದ ಚಿಂತನಾಶಕ್ತಿ ಮೈಗೂಡಿಸಿಕೊಳ್ಳಬೇಕು. ನಮ್ಮ ಸಮುದಾಯದ ನಾಯಕರುಗಳು ಜಯಂತೋತ್ಸವ ಆಚರಣೆ ಮಾಡಲು ಸತತ ಪ್ರಯತ್ನ ದೊಂದಿಗೆ ಇಂದು ರಾಜ್ಯಾದ್ಯಂತ ಆಚರಣೆ ಮಾಡುತ್ತಿದ್ದು ಇಂತಹ ಶಕ್ತಿ ಹಾಗೂ ಸಮುದಾಯದ ಬೆಳವಣಿಗೆಯನ್ನು ಕೊಂಡೊಯ್ಯಲು ನಾವುಗಳು ಒಗ್ಗಟ್ಟಿನ ಶಕ್ತಿ ಅಗತ್ಯತೆ ಎಂದು ತಿಳಿಸಿದರು.

ನಮ್ಮ ಸಮುದಾಯದ ಪರಂಪರೆಯನ್ನು ನಮ್ಮ ಮಕ್ಕಳು ನಮಗೆ ಸೀಮಿತವಾಗಿರದೆ ಒಟ್ಟಿಗೆ  ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವ ಮುಖಾಂತರ ಬದುಕಿಗೆ ವೃತ್ತಿ ಜೀವನಕ್ಕೆ ವಿದ್ಯೆ ಎರಡನ್ನು ನಾವುಗಳು ಕೊಂಡೊಯ್ಯುವ ಮುಖಾಂತರ ನಮ್ಮ ಸಮುದಾಯದ ಏಳಿಗೆಗೆ ವಿಶ್ವಕರ್ಮ ಪರಂಪರೆಗೆ ನಮ್ಮಗಳ ಸೇವೆ ಅನನ್ಯವಾಗಿದೆ ಎಂದರು.

ಇದೇ ವೇಳೆ ತಾಲೂಕು ಆಡಳಿತ ವತಿಯಿಂದ ವಿಶ್ವಕರ್ಮ ಗುರುವಿಗೆ ಪುಷ್ಪನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಉಪ ತಹಸಿಲ್ದಾರಾದ ಭಾಗ್ಯಮ್ಮ ಹಾಗೂ ಇಲಾಖಾಧಿಕಾರಿಗಳು ಹಾಗೂ ವಿಶ್ವಕರ್ಮ ಸಂಘದ ಪದಾಧಿಕಾರಿಗಳು ಇತರರು ಹಾಜರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು