7:53 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ವಿಶ್ವಕರ್ಮ ಸಮಾಜವು ಸಂಘಟನಾತ್ಮಕವಾಗಿ ಒಗ್ಗೂಡಲು ಆದ್ಯತೆ ಕೊಡಿ: ಕೃಷ್ಣಚಾರ್

18/09/2021, 08:51

ವಿಶ್ವಕರ್ಮ ಸಮಾಜವು ಸಂಘಟನಾತ್ಮಕವಾಗಿ ಒಗ್ಗೂಡಲು ಆದ್ಯತೆ ಕೊಡಿ: ಕೃಷ್ಣಚಾರ್

info.reporterkarnataka@gmail.com

ವಿಶ್ವಕರ್ಮ ಸಮುದಾಯವು ಸಂಘಟನಾತ್ಮಕವಾಗಿ ಬೆಳೆಯಲು ಹಾಗೂ ನಮ್ಮ ಸಮುದಾಯವನ್ನು ಗುರುತಿಸಿ ಅಭಿವೃದ್ಧಿಯತ್ತ ಕೊಂಡೊಯ್ಯಲು ಒಗ್ಗಟ್ಟಿನ ಅಗತ್ಯವಿದೆ. ಒಗ್ಗಟ್ಟು ಇದ್ದರೆ ಅಭಿವೃದ್ಧಿಯತ್ತ ಸಾಗಲು ಸಾಧ್ಯವೆಂದು ನಾಗಮಂಗಲ ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಕೃಷ್ಣಚಾರ್ ಹೇಳಿದರು.

ಅವರು ನಾಗಮಂಗಲ ತಾಲೂಕು ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೇವಲ ಕುಸುರಿ ಕೆಲಸವಷ್ಟೇ ಅಲ್ಲದೆ ತಮ್ಮಗಳ ಹಾಗೂ ಸಮುದಾಯದ ಚಿಂತನಾಶಕ್ತಿ ಮೈಗೂಡಿಸಿಕೊಳ್ಳಬೇಕು. ನಮ್ಮ ಸಮುದಾಯದ ನಾಯಕರುಗಳು ಜಯಂತೋತ್ಸವ ಆಚರಣೆ ಮಾಡಲು ಸತತ ಪ್ರಯತ್ನ ದೊಂದಿಗೆ ಇಂದು ರಾಜ್ಯಾದ್ಯಂತ ಆಚರಣೆ ಮಾಡುತ್ತಿದ್ದು ಇಂತಹ ಶಕ್ತಿ ಹಾಗೂ ಸಮುದಾಯದ ಬೆಳವಣಿಗೆಯನ್ನು ಕೊಂಡೊಯ್ಯಲು ನಾವುಗಳು ಒಗ್ಗಟ್ಟಿನ ಶಕ್ತಿ ಅಗತ್ಯತೆ ಎಂದು ತಿಳಿಸಿದರು.

ನಮ್ಮ ಸಮುದಾಯದ ಪರಂಪರೆಯನ್ನು ನಮ್ಮ ಮಕ್ಕಳು ನಮಗೆ ಸೀಮಿತವಾಗಿರದೆ ಒಟ್ಟಿಗೆ  ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವ ಮುಖಾಂತರ ಬದುಕಿಗೆ ವೃತ್ತಿ ಜೀವನಕ್ಕೆ ವಿದ್ಯೆ ಎರಡನ್ನು ನಾವುಗಳು ಕೊಂಡೊಯ್ಯುವ ಮುಖಾಂತರ ನಮ್ಮ ಸಮುದಾಯದ ಏಳಿಗೆಗೆ ವಿಶ್ವಕರ್ಮ ಪರಂಪರೆಗೆ ನಮ್ಮಗಳ ಸೇವೆ ಅನನ್ಯವಾಗಿದೆ ಎಂದರು.

ಇದೇ ವೇಳೆ ತಾಲೂಕು ಆಡಳಿತ ವತಿಯಿಂದ ವಿಶ್ವಕರ್ಮ ಗುರುವಿಗೆ ಪುಷ್ಪನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಉಪ ತಹಸಿಲ್ದಾರಾದ ಭಾಗ್ಯಮ್ಮ ಹಾಗೂ ಇಲಾಖಾಧಿಕಾರಿಗಳು ಹಾಗೂ ವಿಶ್ವಕರ್ಮ ಸಂಘದ ಪದಾಧಿಕಾರಿಗಳು ಇತರರು ಹಾಜರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು