4:58 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ವಿಶ್ವಕರ್ಮ ಸಮಾಜವು ಸಂಘಟನಾತ್ಮಕವಾಗಿ ಒಗ್ಗೂಡಲು ಆದ್ಯತೆ ಕೊಡಿ: ಕೃಷ್ಣಚಾರ್

18/09/2021, 08:51

ವಿಶ್ವಕರ್ಮ ಸಮಾಜವು ಸಂಘಟನಾತ್ಮಕವಾಗಿ ಒಗ್ಗೂಡಲು ಆದ್ಯತೆ ಕೊಡಿ: ಕೃಷ್ಣಚಾರ್

info.reporterkarnataka@gmail.com

ವಿಶ್ವಕರ್ಮ ಸಮುದಾಯವು ಸಂಘಟನಾತ್ಮಕವಾಗಿ ಬೆಳೆಯಲು ಹಾಗೂ ನಮ್ಮ ಸಮುದಾಯವನ್ನು ಗುರುತಿಸಿ ಅಭಿವೃದ್ಧಿಯತ್ತ ಕೊಂಡೊಯ್ಯಲು ಒಗ್ಗಟ್ಟಿನ ಅಗತ್ಯವಿದೆ. ಒಗ್ಗಟ್ಟು ಇದ್ದರೆ ಅಭಿವೃದ್ಧಿಯತ್ತ ಸಾಗಲು ಸಾಧ್ಯವೆಂದು ನಾಗಮಂಗಲ ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಕೃಷ್ಣಚಾರ್ ಹೇಳಿದರು.

ಅವರು ನಾಗಮಂಗಲ ತಾಲೂಕು ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೇವಲ ಕುಸುರಿ ಕೆಲಸವಷ್ಟೇ ಅಲ್ಲದೆ ತಮ್ಮಗಳ ಹಾಗೂ ಸಮುದಾಯದ ಚಿಂತನಾಶಕ್ತಿ ಮೈಗೂಡಿಸಿಕೊಳ್ಳಬೇಕು. ನಮ್ಮ ಸಮುದಾಯದ ನಾಯಕರುಗಳು ಜಯಂತೋತ್ಸವ ಆಚರಣೆ ಮಾಡಲು ಸತತ ಪ್ರಯತ್ನ ದೊಂದಿಗೆ ಇಂದು ರಾಜ್ಯಾದ್ಯಂತ ಆಚರಣೆ ಮಾಡುತ್ತಿದ್ದು ಇಂತಹ ಶಕ್ತಿ ಹಾಗೂ ಸಮುದಾಯದ ಬೆಳವಣಿಗೆಯನ್ನು ಕೊಂಡೊಯ್ಯಲು ನಾವುಗಳು ಒಗ್ಗಟ್ಟಿನ ಶಕ್ತಿ ಅಗತ್ಯತೆ ಎಂದು ತಿಳಿಸಿದರು.

ನಮ್ಮ ಸಮುದಾಯದ ಪರಂಪರೆಯನ್ನು ನಮ್ಮ ಮಕ್ಕಳು ನಮಗೆ ಸೀಮಿತವಾಗಿರದೆ ಒಟ್ಟಿಗೆ  ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವ ಮುಖಾಂತರ ಬದುಕಿಗೆ ವೃತ್ತಿ ಜೀವನಕ್ಕೆ ವಿದ್ಯೆ ಎರಡನ್ನು ನಾವುಗಳು ಕೊಂಡೊಯ್ಯುವ ಮುಖಾಂತರ ನಮ್ಮ ಸಮುದಾಯದ ಏಳಿಗೆಗೆ ವಿಶ್ವಕರ್ಮ ಪರಂಪರೆಗೆ ನಮ್ಮಗಳ ಸೇವೆ ಅನನ್ಯವಾಗಿದೆ ಎಂದರು.

ಇದೇ ವೇಳೆ ತಾಲೂಕು ಆಡಳಿತ ವತಿಯಿಂದ ವಿಶ್ವಕರ್ಮ ಗುರುವಿಗೆ ಪುಷ್ಪನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಉಪ ತಹಸಿಲ್ದಾರಾದ ಭಾಗ್ಯಮ್ಮ ಹಾಗೂ ಇಲಾಖಾಧಿಕಾರಿಗಳು ಹಾಗೂ ವಿಶ್ವಕರ್ಮ ಸಂಘದ ಪದಾಧಿಕಾರಿಗಳು ಇತರರು ಹಾಜರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು