9:30 AM Sunday8 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ವಿಶ್ವಶಾಂತಿ, ಸಾಮರಸ್ಯದ ಬದುಕಿಗೆ ಜೈನ ಧರ್ಮ ಕೊಡುಗೆ ಅಪಾರ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

02/03/2024, 13:45

ವೇಣೂರು(reporterkarnataka.com): ವಿಶ್ವದಲ್ಲಿ ಶಾಂತಿ ನೆಲೆಸಲು ಹಾಗೂ ಸಾಮರಸ್ಯದ ಬದುಕಿಗೆ ಜೈನ‌ಧರ್ಮದ ಕೊಡುಗೆ ಅಪಾರವಾಗಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


ಅವರು ಶುಕ್ರವಾರ ವೇಣೂರಿನಲ್ಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದರು.
ತ್ಯಾಗ, ಸಹನೆಯ ಪ್ರತೀಕವಾಗಿ ಜೈನ ಧರ್ಮವು ಜಗತ್ತಿನಲ್ಲಿ ಅಹಿಂಸೆಯ ಸಂದೇಶ ಹರಡಿದೆ. ಕರ್ನಾಟಕದಲ್ಲಿ ಶ್ರವಣಬೆಳಗೊಳ, ಧರ್ಮಸ್ಥಳ, ಕಾರ್ಕಳ, ವೇಣೂರಿನಲ್ಲಿರುವ ಬಾಹುಬಲಿ ರಾಜ್ಯದ ಶ್ರೀಮಂತ ಸಂಸ್ಕೃತಿ, ಧಾರ್ಮಿಕತೆಯ ಸಂಕೇತವಾಗಿದೆ. ಚಿಕ್ಕಂದಿನಿಂದಲೂ ತಾನು ಹಲವಾರು ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಜೀವನದ ಪುಣ್ಯವಾಗಿದೆ ಎಂದು ಅವರು ಹೇಳಿದರು.
ವೇಣೂರು ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ರಸ್ತೆ ಸೇರಿದಂತೆ ಎಲ್ಲ ಅಗತ್ಯ ಮೂಲಸೌಕರ್ಯವನ್ನು ರಾಜ್ಯ ಸರಕಾರ ಒದಗಿಸಿದೆ. ಮಸ್ತಕಾಭಿಷೇಕಕ್ಕೆ ಅನುದಾನವನ್ನು ನೀಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಸಮಾರಂಭದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಪ್ರತಾಪ ಸಿಂಹ ನಾಯಕ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಮತ್ತಿತರರು ಇದ್ದರು.
ಸಚಿವರು ಬಾಹುಬಲಿ ಮಸ್ತಕಾಭಿಷೇಕ ಕಾರ್ಯಕ್ರಮ ವೀಕ್ಷಿಸಿದರು. ನಂತರ ಮಸ್ತಕಾಭಿಷೇಕ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿರುವ ರಾಜ್ಯ ಸರಕಾರದ ವಿವಿಧ ಯೋಜನೆಗಳ ಮಾಹಿತಿ ನೀಡುವ ವಸ್ತುಪ್ರದರ್ಶನವನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು