11:03 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ವಿಶ್ವಶಾಂತಿ, ಸಾಮರಸ್ಯದ ಬದುಕಿಗೆ ಜೈನ ಧರ್ಮ ಕೊಡುಗೆ ಅಪಾರ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

02/03/2024, 13:45

ವೇಣೂರು(reporterkarnataka.com): ವಿಶ್ವದಲ್ಲಿ ಶಾಂತಿ ನೆಲೆಸಲು ಹಾಗೂ ಸಾಮರಸ್ಯದ ಬದುಕಿಗೆ ಜೈನ‌ಧರ್ಮದ ಕೊಡುಗೆ ಅಪಾರವಾಗಿದೆ ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


ಅವರು ಶುಕ್ರವಾರ ವೇಣೂರಿನಲ್ಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದರು.
ತ್ಯಾಗ, ಸಹನೆಯ ಪ್ರತೀಕವಾಗಿ ಜೈನ ಧರ್ಮವು ಜಗತ್ತಿನಲ್ಲಿ ಅಹಿಂಸೆಯ ಸಂದೇಶ ಹರಡಿದೆ. ಕರ್ನಾಟಕದಲ್ಲಿ ಶ್ರವಣಬೆಳಗೊಳ, ಧರ್ಮಸ್ಥಳ, ಕಾರ್ಕಳ, ವೇಣೂರಿನಲ್ಲಿರುವ ಬಾಹುಬಲಿ ರಾಜ್ಯದ ಶ್ರೀಮಂತ ಸಂಸ್ಕೃತಿ, ಧಾರ್ಮಿಕತೆಯ ಸಂಕೇತವಾಗಿದೆ. ಚಿಕ್ಕಂದಿನಿಂದಲೂ ತಾನು ಹಲವಾರು ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಜೀವನದ ಪುಣ್ಯವಾಗಿದೆ ಎಂದು ಅವರು ಹೇಳಿದರು.
ವೇಣೂರು ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ರಸ್ತೆ ಸೇರಿದಂತೆ ಎಲ್ಲ ಅಗತ್ಯ ಮೂಲಸೌಕರ್ಯವನ್ನು ರಾಜ್ಯ ಸರಕಾರ ಒದಗಿಸಿದೆ. ಮಸ್ತಕಾಭಿಷೇಕಕ್ಕೆ ಅನುದಾನವನ್ನು ನೀಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಸಮಾರಂಭದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಪ್ರತಾಪ ಸಿಂಹ ನಾಯಕ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಮತ್ತಿತರರು ಇದ್ದರು.
ಸಚಿವರು ಬಾಹುಬಲಿ ಮಸ್ತಕಾಭಿಷೇಕ ಕಾರ್ಯಕ್ರಮ ವೀಕ್ಷಿಸಿದರು. ನಂತರ ಮಸ್ತಕಾಭಿಷೇಕ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಏರ್ಪಡಿಸಿರುವ ರಾಜ್ಯ ಸರಕಾರದ ವಿವಿಧ ಯೋಜನೆಗಳ ಮಾಹಿತಿ ನೀಡುವ ವಸ್ತುಪ್ರದರ್ಶನವನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು