6:55 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

RK Exclusive : ವಿಸ್ಟಾಡೋಮ್ ಹೊಸ ಪ್ರಯೋಗವೇ ?ರಾಜಕಾರಣಿಗಳು ಬಿಟ್ಟದ್ದು ರೈಲೇ? ಹಾಗಾದರೆ ಕೊಂಕಣ ರೈಲು ಓಡಿಸಿದ್ದು ಮತ್ಯೇನು? 

13/07/2021, 14:39

ಮಂಗಳೂರು(reporterkarnataka news): ಪಶ್ಚಿಮ ಘಟ್ಟದ ಪ್ರಕೃತಿ ಸೌಂದರ್ಯವನ್ನು ಅಸ್ವಾದಿಸಲು ಮಂಗಳೂರು-ಬೆಂಗಳೂರು ರೈಲಿನಲ್ಲಿ ಅಳವಡಿಸಲಾದ ಗಾಜಿನ ಛಾವಣಿ(ವಿಸ್ಟಾಡೋಮ್) ಹೊಂದಿರುವ ಬೋಗಿಗಳು ರೈಲ್ವೆಯ ನೂತನ ಪ್ರಯೋಗವೇ? ದಕ್ಷಿಣ ಭಾರತದಲ್ಲೇ ಇದನ್ನು ಮೊದಲ ಬಾರಿಗೆ ಬಳಸಲಾಗಿದೆ? ರಾಜಕಾರಣಿಗಳು, ಅಧಿಕಾರಿಗಳು  ಹೇಳಿರುವುದು ನಿಜವೇ?


ಜುಲೈ 11ರಂದು ವಿಸ್ಟಾಡೋಮ್ ಬೋಗಿಗಳನ್ನೊಳಗೊಂಡ ಮಂಗಳೂರು- ಬೆಂಗಳೂರು ರೈಲು ಸಂಚಾರಕ್ಕೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಸಿರು ನಿಶಾನೆ ತೋರಿಸಿದ್ದರು.

ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ,ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಹಾಗೂ ರೈಲ್ವೆ ಅಧಿಕಾರಿಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಗಾಜಿನ ಬೋಗಿಗಳ ಪ್ರಯೋಗ ದಕ್ಷಿಣ ಭಾರತದಲ್ಲೇ ಮೊದಲ ಬಾರಿ ಎನ್ನುವಂತೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಬಣ್ಣಿಸಿದ್ದರು. ಆದರೆ ವಾಸ್ತವದಲ್ಲಿ ಇದು ನಿಜವಲ್ಲ ಎನ್ನುವುದು ಭಾರತೀಯ ರೈಲ್ವೆ ಇತಿಹಾಸವನ್ನು ಕೆದಕಿದಾಗ ತಿಳಿದು ಬರುತ್ತದೆ.


ವಿಸ್ಟಾಡೋಮ್ ಬೋಗಿಗಳನ್ನು ಈ ಹಿಂದೆ ಕೊಂಕಣ ರೈಲ್ವೆ ನಿಗಮ ತನ್ನ ರೈಲಿನಲ್ಲಿ ಉಪಯೋಗಿಸಿತ್ತು. ಕರಾವಳಿಯ ಹೆಮ್ಮೆಯ ರಾಜಕಾರಣಿ ಜಾರ್ಜ್ ಫೆರ್ನಾಂಡಿಸ್ ಅವರ ಕನಸಿನ ಕೂಸಾದ ಕೊಂಕಣ ರೈಲ್ವೆ ನಿಗಮ ಮಂಗಳೂರು- ಮುಂಬೈ ರೈಲಿನಲ್ಲಿ ವಿಸ್ಟಾಡೋಮ್ ಬೋಗಿಗಳ ಪ್ರಯೋಗ ಮಾಡಿತ್ತು. ಆದರೆ ಅಂದು ಸಾಮಾಜಿಕ ಜಾಲತಾಣಗಳು ಇರಲಿಲ್ಲ. ಸ್ಮಾರ್ಟ್ ಫೋನ್ ಯಾರ ಜೇಬನ್ನೂ ಸೇರಿರಲಿಲ್ಲ. ಎಲ್ಲಕ್ಕಿಂತ ಮಿಗಿಲಾಗಿ ಅತ್ಯಂತ ಸರಳ, ಸಜ್ಜನ ರಾಜಕಾರಣಿಯಾದ ಜಾರ್ಜ್ ಫೆರ್ನಾಂಡಿಸ್ ಅವರಿಗೆ ಪ್ರಚಾರದ ಗೀಳು ಇರಲಿಲ್ಲ.

ಅಂದು ಕೊಂಕಣ ರೈಲ್ವೆಯಲ್ಲಿ ಉಪಯೋಗಿಸಿದ ವಿಸ್ಟಾಡೋಮ್ ಬೋಗಿಗಳು ಪ್ರಸ್ತುತ ಮಂಗಳೂರು- ಬೆಂಗಳೂರು ರೈಲಿನಲ್ಲಿ ಬಳಸಲಾದ ವಿಸ್ಟಾಡೋಮ್ ಬೋಗಿಗಳಷ್ಟೇಅತ್ಯಾಧುನಿಕವಾಗಿತ್ತು. ಎಸಿ, ತಿರುಗುವ ಕುರ್ಚಿ, ಗಾಜಿನ ಛಾವಣಿ, ನೀಳವಾದ ಕಿಟಕಿ, ಸುಸಜ್ಜಿತ ಶೌಚಾಲಯ, ವಾಶ್ ಬೇಸಿನ್ , ಸ್ಟೀಲ್ ಲಗೇಜ್ ಕವಾಟು ಎಲ್ಲವೂ ಅದರಲ್ಲಿತ್ತು. ವಿಶೇಷವೆಂದರೆ ಅಂದಿನ ವಿಸ್ಟಾಡೋಮ್ ಬೋಗಿಗಳನ್ನು ಚೆನ್ನೈನ ಇಂಟಿಗ್ರಲ್ ಕೋಚ್ ಫ್ಯಾಕ್ಟರಿ ಎಲ್ಎಚ್ಬಿ (ಲಿಂಕೆ-ಹಾಫ್ಮನ್-ಬುಶ್ ಪ್ಲಾಟ್ಫಾರ್ಮ್ / ತಂತ್ರಜ್ಞಾನ) ನಲ್ಲಿ ತಯಾರಿಸಲಾಗಿತ್ತು. ಮಂಗಳೂರು- ಬೆಂಗಳೂರು ರೈಲಿಗೆ ಅಳವಡಿಸಿದ ಬೋಗಿಗಳನ್ನು ಕೂಡ ಅದೇ ಫ್ಯಾಕ್ಟರಿಯಲ್ಲಿ ತಯಾರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು