4:58 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:…

ಇತ್ತೀಚಿನ ಸುದ್ದಿ

ವಿಟಮಿನ್ ‘ಎ’ ಪ್ರಾಮುಖ್ಯತೆ: ಯಾವುದರಲೆಲ್ಲ ಇದು ಸಿಗುತ್ತದೆ?; ಕೊರತೆಯ ಲಕ್ಷಣಗಳೇನು ?

28/01/2022, 23:31

ಮೊಟ್ಟ ಮೊದಲು ಕಂಡುಹಿಡಿದ ವಿಟಮಿನ್ ಅಂದರೆ ವಿಟಮಿನ್ A. ಇದು ಕಣ್ಣಿನ ಆರೋಗ್ಯಕ್ಕೆ ಬೇಕಾದ ಅತೀ ಮುಖ್ಯವಾದ ಅಂಶವಾಗಿದೆ. ಇದು ಸಸ್ಯಾಹಾರ ಹಾಗು ಮಾಂಸಾಹಾರ ಎರಡೂ ಮೂಲಗಳಿಂದ ದೊರೆಯುತ್ತದೆ.

ಮೊಟ್ಟೆ, ಕೋಳಿ ಮಾಂಸ, ಲಿವರ್, ಹಾಲು, ತುಪ್ಪ ,ಬೆಣ್ಣೆ, ಕಾಳುಗಳು , ಹಸಿರು ತರಕಾರಿ, ಕ್ಯಾರಟ್, ಸಿಹಿಗುಂಬಳಕಾಯಿ, ಹಳದಿ ಬಣ್ಣದ ಹಣ್ಣು ಪಪ್ಪಾಯ, ಮಾವಿನಕಾಯಿ, ಫಿಶ್ ಲಿವರ್ ಆಯಿಲ್ ಇವುಗಳಲ್ಲಿ ಹೇರಳವಾಗಿ ವಿಟಮಿನ್ A ಕಂಡು ಬರುತ್ತದೆ.

ಬೇರೆ ಬೇರೆ ಕಾರಣಗಳಿಂದ ಇದರ ಅಂಶದ ಕೊರತೆ  ನಮ್ಮ ದೇಹದಲ್ಲಿ ಕಂಡುಬರುತ್ತದೆ.

* ಜೀರ್ಣನಾಂಗವ್ಯೂಹದಲ್ಲಿನ ತೊಂದರೆಯಿಂದಾಗಿ ನಾವು ಸೇವಿಸಿದ ವಿಟಮಿನ್ಅನ್ನು ನಮ್ಮ ದೇಹ ಸರಿಯಾಗಿ ಹೀರಿಕೊಳ್ಳದೇ ಇರುವುದರಿಂದ

* ಲಿವರ್ /ಪಿತ್ತಜನಕಾಂಗದ ಖಾಯಿಲೆ

* ಗರ್ಭಿಣಿಯರಲ್ಲಿ, ಬೆಳೆಯುವ ಮಕ್ಕಳಲ್ಲಿ ಅಧಿಕ  ಬೇಡಿಕೆ  ಇದ್ದಾಗ ಸರಿಯಾಗಿ ಆಹಾರದಲ್ಲಿ ಪೂರೈಕೆ ಆಗದೇ ಇರುವುದರಿಂದ ವಿಟಮಿನ್ A ಕೊರತೆ ಉಂಟಾಗುತ್ತದೆ.

ಲಕ್ಷಣಗಳು ಏನು?:

ಮೊತ್ತ ಮೊದಲಿಗೆ ಕಂಡು ಬರುವ ಲಕ್ಷಣ ಎಂದರೆ ಇರುಳುಗಣ್ಣು, ಮಂದ ಬೆಳಕಿನಲ್ಲಿ ಸರಿಯಾಗಿ ಕಾಣಿಸದೇ ಇರುವುದು, ಒಣ ಚರ್ಮ, ಮೂಳೆಗಳ ಸರಿಯಾದ ಬೆಳವಣಿಗೆ ಆಗದೆ ಮಕ್ಕಳಲ್ಲಿ ಬೆಳವಣಿಗೆ ಕುಂಠಿತವಾಗುವುದು, ರೋಗ ನಿರೋಧಕ ಶಕ್ತಿ ಕಡಿಮೆ ಆಗಿ ಸೋಂಕು  ಸುಲಭವಾಗಿ ತಗಲುವುದು , ನರಗಳ ಕಾರ್ಯಕ್ಷಮತೆ ತಗ್ಗುವುದು, ಕಣ್ಣಿನ ಬಿಳಿಭಾಗಕ್ಕೆ ಸಂಬಂಧಿಸಿದ ತೊಂದರೆ, ಕೆಲವೊಮ್ಮೆ ಶಾಶ್ವತವಾಗಿ ದೃಷ್ಟಿಹೀನರನ್ನಾಗಿ ಮಾಡಬಹುದು.

RDA ಪ್ರಕಾರ ಒಬ್ಬ ಆರೋಗ್ಯವಂತನಿಗೆ, ಮಗುವಿನಿಂದ ಹಿಡಿದು ವಯಸ್ಕರವರೆಗೆ ದಿನವೊಂದಕ್ಕೆ ಸುಮಾರು 350ರಿಂದ 950 ಮೈಕ್ರೋ ಗ್ರಾಂನಷ್ಟು ವಿಟಮಿನ್ A ಆಹಾರದ ಮೂಲಕ ಸೇವನೆ ಮಾಡುವುದದಿಂದ ಈ ಎಲ್ಲಾ ತೊಂದರೆಗಳು ಬಾರದಂತೆ ತಡೆಗಟ್ಟಬಹುದು. ಹಾಗೆಂದು ಅತಿಯಾದ ಸೇವನೆಯೂ ಸಹ ತೊಂದರೆಯನ್ನ ಉಂಟುಮಾಡಬಹುದು. ಆದ್ದರಿಂದ ದೇಹಕ್ಕೆ ಅನುಗುಣವಾಗಿ ಸರಿಯಾದ ಪ್ರಮಾಣವನ್ನು ಸೇವನೆ ಮಾಡುವುದು ಒಳಿತು.

✍️ ಡಾ. ಭವ್ಯ ಶೆಟ್ಟಿ

ಹೋಮಿಯೋಪತಿ ವೈದ್ಯರು

ಶ್ರೀ ಗುರು ಹೋಮಿಯೋಪತಿ ಕ್ಲೀನಿಕ್ ಬೆಳುವಾಯಿ

ಇತ್ತೀಚಿನ ಸುದ್ದಿ

ಜಾಹೀರಾತು