2:26 PM Friday22 - May 2026
ಬ್ರೇಕಿಂಗ್ ನ್ಯೂಸ್
ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:…

ಇತ್ತೀಚಿನ ಸುದ್ದಿ

ವಿಟಮಿನ್ ‘ಎ’ ಪ್ರಾಮುಖ್ಯತೆ: ಯಾವುದರಲೆಲ್ಲ ಇದು ಸಿಗುತ್ತದೆ?; ಕೊರತೆಯ ಲಕ್ಷಣಗಳೇನು ?

28/01/2022, 23:31

ಮೊಟ್ಟ ಮೊದಲು ಕಂಡುಹಿಡಿದ ವಿಟಮಿನ್ ಅಂದರೆ ವಿಟಮಿನ್ A. ಇದು ಕಣ್ಣಿನ ಆರೋಗ್ಯಕ್ಕೆ ಬೇಕಾದ ಅತೀ ಮುಖ್ಯವಾದ ಅಂಶವಾಗಿದೆ. ಇದು ಸಸ್ಯಾಹಾರ ಹಾಗು ಮಾಂಸಾಹಾರ ಎರಡೂ ಮೂಲಗಳಿಂದ ದೊರೆಯುತ್ತದೆ.

ಮೊಟ್ಟೆ, ಕೋಳಿ ಮಾಂಸ, ಲಿವರ್, ಹಾಲು, ತುಪ್ಪ ,ಬೆಣ್ಣೆ, ಕಾಳುಗಳು , ಹಸಿರು ತರಕಾರಿ, ಕ್ಯಾರಟ್, ಸಿಹಿಗುಂಬಳಕಾಯಿ, ಹಳದಿ ಬಣ್ಣದ ಹಣ್ಣು ಪಪ್ಪಾಯ, ಮಾವಿನಕಾಯಿ, ಫಿಶ್ ಲಿವರ್ ಆಯಿಲ್ ಇವುಗಳಲ್ಲಿ ಹೇರಳವಾಗಿ ವಿಟಮಿನ್ A ಕಂಡು ಬರುತ್ತದೆ.

ಬೇರೆ ಬೇರೆ ಕಾರಣಗಳಿಂದ ಇದರ ಅಂಶದ ಕೊರತೆ  ನಮ್ಮ ದೇಹದಲ್ಲಿ ಕಂಡುಬರುತ್ತದೆ.

* ಜೀರ್ಣನಾಂಗವ್ಯೂಹದಲ್ಲಿನ ತೊಂದರೆಯಿಂದಾಗಿ ನಾವು ಸೇವಿಸಿದ ವಿಟಮಿನ್ಅನ್ನು ನಮ್ಮ ದೇಹ ಸರಿಯಾಗಿ ಹೀರಿಕೊಳ್ಳದೇ ಇರುವುದರಿಂದ

* ಲಿವರ್ /ಪಿತ್ತಜನಕಾಂಗದ ಖಾಯಿಲೆ

* ಗರ್ಭಿಣಿಯರಲ್ಲಿ, ಬೆಳೆಯುವ ಮಕ್ಕಳಲ್ಲಿ ಅಧಿಕ  ಬೇಡಿಕೆ  ಇದ್ದಾಗ ಸರಿಯಾಗಿ ಆಹಾರದಲ್ಲಿ ಪೂರೈಕೆ ಆಗದೇ ಇರುವುದರಿಂದ ವಿಟಮಿನ್ A ಕೊರತೆ ಉಂಟಾಗುತ್ತದೆ.

ಲಕ್ಷಣಗಳು ಏನು?:

ಮೊತ್ತ ಮೊದಲಿಗೆ ಕಂಡು ಬರುವ ಲಕ್ಷಣ ಎಂದರೆ ಇರುಳುಗಣ್ಣು, ಮಂದ ಬೆಳಕಿನಲ್ಲಿ ಸರಿಯಾಗಿ ಕಾಣಿಸದೇ ಇರುವುದು, ಒಣ ಚರ್ಮ, ಮೂಳೆಗಳ ಸರಿಯಾದ ಬೆಳವಣಿಗೆ ಆಗದೆ ಮಕ್ಕಳಲ್ಲಿ ಬೆಳವಣಿಗೆ ಕುಂಠಿತವಾಗುವುದು, ರೋಗ ನಿರೋಧಕ ಶಕ್ತಿ ಕಡಿಮೆ ಆಗಿ ಸೋಂಕು  ಸುಲಭವಾಗಿ ತಗಲುವುದು , ನರಗಳ ಕಾರ್ಯಕ್ಷಮತೆ ತಗ್ಗುವುದು, ಕಣ್ಣಿನ ಬಿಳಿಭಾಗಕ್ಕೆ ಸಂಬಂಧಿಸಿದ ತೊಂದರೆ, ಕೆಲವೊಮ್ಮೆ ಶಾಶ್ವತವಾಗಿ ದೃಷ್ಟಿಹೀನರನ್ನಾಗಿ ಮಾಡಬಹುದು.

RDA ಪ್ರಕಾರ ಒಬ್ಬ ಆರೋಗ್ಯವಂತನಿಗೆ, ಮಗುವಿನಿಂದ ಹಿಡಿದು ವಯಸ್ಕರವರೆಗೆ ದಿನವೊಂದಕ್ಕೆ ಸುಮಾರು 350ರಿಂದ 950 ಮೈಕ್ರೋ ಗ್ರಾಂನಷ್ಟು ವಿಟಮಿನ್ A ಆಹಾರದ ಮೂಲಕ ಸೇವನೆ ಮಾಡುವುದದಿಂದ ಈ ಎಲ್ಲಾ ತೊಂದರೆಗಳು ಬಾರದಂತೆ ತಡೆಗಟ್ಟಬಹುದು. ಹಾಗೆಂದು ಅತಿಯಾದ ಸೇವನೆಯೂ ಸಹ ತೊಂದರೆಯನ್ನ ಉಂಟುಮಾಡಬಹುದು. ಆದ್ದರಿಂದ ದೇಹಕ್ಕೆ ಅನುಗುಣವಾಗಿ ಸರಿಯಾದ ಪ್ರಮಾಣವನ್ನು ಸೇವನೆ ಮಾಡುವುದು ಒಳಿತು.

✍️ ಡಾ. ಭವ್ಯ ಶೆಟ್ಟಿ

ಹೋಮಿಯೋಪತಿ ವೈದ್ಯರು

ಶ್ರೀ ಗುರು ಹೋಮಿಯೋಪತಿ ಕ್ಲೀನಿಕ್ ಬೆಳುವಾಯಿ

ಇತ್ತೀಚಿನ ಸುದ್ದಿ

ಜಾಹೀರಾತು