7:22 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ವಿಟ್ಲ: 9ನೇ ತರಗತಿಯ ಅಪ್ರಾಪ್ತ ಬಾಲಕಿ ಆತ್ಮಹತ್ಯೆಪ್ರಕರಣ; ಆರೋಪಿ ಯುವಕನ ಬಂಧನ

06/05/2022, 21:12

ಬಂಟ್ವಾಳ(reporterkarnataka.com): ಇಲ್ಲಿನ ವಿಟ್ಲ ಸಮೀಪದ ಕನ್ಯಾನ ಗ್ರಾಮದ ಕಾಣಿಯೂರು ನಿವಾಸಿ 14 ವರ್ಷದ 9ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಾಹುಲ್ ಹಮೀದ್ (30)ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ತನ್ನ ಮನೆಯಲ್ಲಿವ ಬುಧವಾರ ಶವವಾಗಿ ಪತ್ತೆಯಾಗಿದ್ದಳು.

ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದು, ಹೆತ್ತವರು ಆಗಮಿಸಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯ ಪೋಷಕರು ಕೆಲಸದ ನಿಮಿತ್ತ ಮತ್ತು ಆಕೆಯ ಸಹೋದರ ಔಷಧಿ ತರಲು ಹೊರಗೆ ಹೋಗಿದ್ದರು.

ಕೆಲಸ ನಿಮಿತ್ತ ಹೊರಗೆ ಹೋಗಿದ್ದ ಆಕೆಯ ಪೋಷಕರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಮನೆಗೆ ಹಿಂತಿರುಗಿದಾಗ ಮಗಳು ಮಲಗುವ ಕೋಣೆಯ ಮೇಲ್ಛಾವಣಿಯಲ್ಲಿ ನೇಣು ಬಿಗಿದಿರುವುದನ್ನು ಕಂಡು ಬಂದಿತ್ತು.

ಹೆತ್ತವರು ಇತ್ತೀಚೆಗೆ ತಮ್ಮ ಮಗಳ ಮೊಬೈಲ್ ಫೋನ್ ಪರಿಶೀಲಿಸಿದಾಗ ಆಕೆ 30 ವರ್ಷದ ಸಾಹುಲ್ ಹಮೀದ್ ಎಂಬಾತನನ್ನು ಪ್ರೀತಿಸುತ್ತಿರುವ ವಿಷಯ ಬೆಳಕಿಗೆ ಬಂದಿತ್ತು.

ಹಮೀದ್ ಜೊತೆಗಿನ ಸಂಬಂಧವನ್ನು ಮುರಿಯುವಂತೆ ಮಗಳನ್ನು ಕೇಳಿಕೊಂಡಿದ್ದಾರೆ. ಅಲ್ಲದೇ ಹಮೀದ್ ನನ್ನು ಭೇಟಿಯಾಗಿ ಮಗಳ ಜತೆಗಿನ ಸಂಬಂಧವನ್ನು ಮುಂದುವರಿಸದಂತೆ ಕೇಳಿಕೊಂಡಿದ್ದಾರೆ. ಆದರೆ ಹಮೀದ್ ಕೇಳಲಿಲ್ಲ ಮತ್ತು ಸಂಬಂಧವನ್ನು ಮುಂದುವರಿಸಲು ಮಗಳನ್ನು ಪೀಡಿಸುತ್ತಿದ್ದನು. ಸಂಬಂಧವನ್ನು ಮುಂದುವರಿಸಲು ಉದ್ದೇಶಿಸದಿದ್ದರೆ ಜೀವನವನ್ನು ಕೊನೆಗೊಳಿಸುವಂತೆ ಹಮೀದ್ ಬಾಲಕಿಗೆ ತಾಕೀತು ಮಾಡಿದ್ದ ಎಂದು ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದರು.

ವಿಟ್ಲ ಪೊಲೀಸರು ಇದೀಗ ಆರೋಪಿ ಹಮೀದ್ ನನ್ನು ಬಂಧಿಸಿದ್ದಾರೆ.ಹಮೀದ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 305 ( ಅಪ್ರಾಪ್ತೆಯ ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಬಲಿಪಶು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಹಮೀದ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 (2) (v) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು