4:38 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ವಿಟ್ಲ: 9ನೇ ತರಗತಿಯ ಅಪ್ರಾಪ್ತ ಬಾಲಕಿ ಆತ್ಮಹತ್ಯೆಪ್ರಕರಣ; ಆರೋಪಿ ಯುವಕನ ಬಂಧನ

06/05/2022, 21:12

ಬಂಟ್ವಾಳ(reporterkarnataka.com): ಇಲ್ಲಿನ ವಿಟ್ಲ ಸಮೀಪದ ಕನ್ಯಾನ ಗ್ರಾಮದ ಕಾಣಿಯೂರು ನಿವಾಸಿ 14 ವರ್ಷದ 9ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಾಹುಲ್ ಹಮೀದ್ (30)ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿ ತನ್ನ ಮನೆಯಲ್ಲಿವ ಬುಧವಾರ ಶವವಾಗಿ ಪತ್ತೆಯಾಗಿದ್ದಳು.

ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದು, ಹೆತ್ತವರು ಆಗಮಿಸಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯ ಪೋಷಕರು ಕೆಲಸದ ನಿಮಿತ್ತ ಮತ್ತು ಆಕೆಯ ಸಹೋದರ ಔಷಧಿ ತರಲು ಹೊರಗೆ ಹೋಗಿದ್ದರು.

ಕೆಲಸ ನಿಮಿತ್ತ ಹೊರಗೆ ಹೋಗಿದ್ದ ಆಕೆಯ ಪೋಷಕರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಮನೆಗೆ ಹಿಂತಿರುಗಿದಾಗ ಮಗಳು ಮಲಗುವ ಕೋಣೆಯ ಮೇಲ್ಛಾವಣಿಯಲ್ಲಿ ನೇಣು ಬಿಗಿದಿರುವುದನ್ನು ಕಂಡು ಬಂದಿತ್ತು.

ಹೆತ್ತವರು ಇತ್ತೀಚೆಗೆ ತಮ್ಮ ಮಗಳ ಮೊಬೈಲ್ ಫೋನ್ ಪರಿಶೀಲಿಸಿದಾಗ ಆಕೆ 30 ವರ್ಷದ ಸಾಹುಲ್ ಹಮೀದ್ ಎಂಬಾತನನ್ನು ಪ್ರೀತಿಸುತ್ತಿರುವ ವಿಷಯ ಬೆಳಕಿಗೆ ಬಂದಿತ್ತು.

ಹಮೀದ್ ಜೊತೆಗಿನ ಸಂಬಂಧವನ್ನು ಮುರಿಯುವಂತೆ ಮಗಳನ್ನು ಕೇಳಿಕೊಂಡಿದ್ದಾರೆ. ಅಲ್ಲದೇ ಹಮೀದ್ ನನ್ನು ಭೇಟಿಯಾಗಿ ಮಗಳ ಜತೆಗಿನ ಸಂಬಂಧವನ್ನು ಮುಂದುವರಿಸದಂತೆ ಕೇಳಿಕೊಂಡಿದ್ದಾರೆ. ಆದರೆ ಹಮೀದ್ ಕೇಳಲಿಲ್ಲ ಮತ್ತು ಸಂಬಂಧವನ್ನು ಮುಂದುವರಿಸಲು ಮಗಳನ್ನು ಪೀಡಿಸುತ್ತಿದ್ದನು. ಸಂಬಂಧವನ್ನು ಮುಂದುವರಿಸಲು ಉದ್ದೇಶಿಸದಿದ್ದರೆ ಜೀವನವನ್ನು ಕೊನೆಗೊಳಿಸುವಂತೆ ಹಮೀದ್ ಬಾಲಕಿಗೆ ತಾಕೀತು ಮಾಡಿದ್ದ ಎಂದು ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದರು.

ವಿಟ್ಲ ಪೊಲೀಸರು ಇದೀಗ ಆರೋಪಿ ಹಮೀದ್ ನನ್ನು ಬಂಧಿಸಿದ್ದಾರೆ.ಹಮೀದ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 305 ( ಅಪ್ರಾಪ್ತೆಯ ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಬಲಿಪಶು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಹಮೀದ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 (2) (v) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು