7:44 PM Monday7 - July 2025
ಬ್ರೇಕಿಂಗ್ ನ್ಯೂಸ್
Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು

ಇತ್ತೀಚಿನ ಸುದ್ದಿ

ವಿಟ್ಲ: 9ನೇ ತರಗತಿಯ ಅಪ್ರಾಪ್ತ ಬಾಲಕಿ ನೇಣಿಗೆ ಶರಣು; ಪ್ರೀತಿಸಲು ಒತ್ತಾಯಿಸುತ್ತಿದ್ದ ಯುವಕನ ವಿರುದ್ಧ ಕೇಸು

05/05/2022, 10:16

ಬಂಟ್ವಾಳ(reporterkarnataka.com): ಇಲ್ಲಿನ ವಿಟ್ಲ ಸಮೀಪದ ಕನ್ಯಾನ ಗ್ರಾಮದ ಕಾಣಿಯೂರು ನಿವಾಸಿ 14 ವರ್ಷದ 9ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಬುಧವಾರ ಶವವಾಗಿ ಪತ್ತೆಯಾಗಿದ್ದಾಳೆ.

ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದು, ಹೆತ್ತವರು ಆಗಮಿಸಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯ ಪೋಷಕರು ಕೆಲಸದ ನಿಮಿತ್ತ ಮತ್ತು ಆಕೆಯ ಸಹೋದರ ಔಷಧಿ ತರಲು ಹೊರಗೆ ಹೋಗಿದ್ದರು ಎಂದು ತಿಳಿದು ಬಂದಿದೆ.

ಕೆಲಸ ನಿಮಿತ್ತ ಹೊರಗೆ ಹೋಗಿದ್ದ ಆಕೆಯ ಪೋಷಕರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಮನೆಗೆ ಹಿಂತಿರುಗಿದಾಗ ಮಗಳು ಮಲಗುವ ಕೋಣೆಯ ಮೇಲ್ಛಾವಣಿಯಲ್ಲಿ ನೇಣು ಬಿಗಿದಿರುವುದನ್ನು ಕಂಡು ಬಂತು.

ಹೆತ್ತವರು ಇತ್ತೀಚೆಗೆ ತಮ್ಮ ಮಗಳ ಮೊಬೈಲ್ ಫೋನ್ ಪರಿಶೀಲಿಸಿದಾಗ ಆಕೆ 30 ವರ್ಷದ ಸಾಹುಲ್ ಹಮೀದ್ ಎಂಬಾತನನ್ನು ಪ್ರೀತಿಸುತ್ತಿರುವ ವಿಷಯ ಬೆಳಕಿಗೆ ಬಂತು ಎಂದು ಆಕೆಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಹಮೀದ್ ಜೊತೆಗಿನ ಸಂಬಂಧವನ್ನು ಮುರಿಯುವಂತೆ ಮಗಳನ್ನು ಕೇಳಿಕೊಂಡಿದ್ದಾರೆ. ಅಲ್ಲದೇ ಹಮೀದ್ ನನ್ನು ಭೇಟಿಯಾಗಿ ಮಗಳ ಜತೆಗಿನ ಸಂಬಂಧವನ್ನು ಮುಂದುವರಿಸದಂತೆ ಕೇಳಿಕೊಂಡಿದ್ದಾರೆ. ಆದರೆ ಹಮೀದ್ ಕೇಳಲಿಲ್ಲ ಮತ್ತು ಸಂಬಂಧವನ್ನು ಮುಂದುವರಿಸಲು ಮಗಳನ್ನು ಪೀಡಿಸುತ್ತಿದ್ದನು. ಸಂಬಂಧವನ್ನು ಮುಂದುವರಿಸಲು ಉದ್ದೇಶಿಸದಿದ್ದರೆ ಜೀವನವನ್ನು ಕೊನೆಗೊಳಿಸುವಂತೆ ಹಮೀದ್ ಬಾಲಕಿಗೆ ತಾಕೀತು ಮಾಡಿದ್ದ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

ಅವರ ದೂರಿನ ಮೇರೆಗೆ ವಿಟ್ಲ ಪೊಲೀಸರು ಹಮೀದ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 305 ( ಅಪ್ರಾಪ್ತೆಯ ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಬಲಿಪಶು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಹಮೀದ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 (2) (v) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು