5:13 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ವಿಟ್ಲ: 9ನೇ ತರಗತಿಯ ಅಪ್ರಾಪ್ತ ಬಾಲಕಿ ನೇಣಿಗೆ ಶರಣು; ಪ್ರೀತಿಸಲು ಒತ್ತಾಯಿಸುತ್ತಿದ್ದ ಯುವಕನ ವಿರುದ್ಧ ಕೇಸು

05/05/2022, 10:16

ಬಂಟ್ವಾಳ(reporterkarnataka.com): ಇಲ್ಲಿನ ವಿಟ್ಲ ಸಮೀಪದ ಕನ್ಯಾನ ಗ್ರಾಮದ ಕಾಣಿಯೂರು ನಿವಾಸಿ 14 ವರ್ಷದ 9ನೇ ತರಗತಿಯ ಅಪ್ರಾಪ್ತ ವಯಸ್ಸಿನ ಬಾಲಕಿ ಬುಧವಾರ ಶವವಾಗಿ ಪತ್ತೆಯಾಗಿದ್ದಾಳೆ.

ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದು, ಹೆತ್ತವರು ಆಗಮಿಸಿದಾಗ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಆಕೆಯ ಪೋಷಕರು ಕೆಲಸದ ನಿಮಿತ್ತ ಮತ್ತು ಆಕೆಯ ಸಹೋದರ ಔಷಧಿ ತರಲು ಹೊರಗೆ ಹೋಗಿದ್ದರು ಎಂದು ತಿಳಿದು ಬಂದಿದೆ.

ಕೆಲಸ ನಿಮಿತ್ತ ಹೊರಗೆ ಹೋಗಿದ್ದ ಆಕೆಯ ಪೋಷಕರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಮನೆಗೆ ಹಿಂತಿರುಗಿದಾಗ ಮಗಳು ಮಲಗುವ ಕೋಣೆಯ ಮೇಲ್ಛಾವಣಿಯಲ್ಲಿ ನೇಣು ಬಿಗಿದಿರುವುದನ್ನು ಕಂಡು ಬಂತು.

ಹೆತ್ತವರು ಇತ್ತೀಚೆಗೆ ತಮ್ಮ ಮಗಳ ಮೊಬೈಲ್ ಫೋನ್ ಪರಿಶೀಲಿಸಿದಾಗ ಆಕೆ 30 ವರ್ಷದ ಸಾಹುಲ್ ಹಮೀದ್ ಎಂಬಾತನನ್ನು ಪ್ರೀತಿಸುತ್ತಿರುವ ವಿಷಯ ಬೆಳಕಿಗೆ ಬಂತು ಎಂದು ಆಕೆಯ ತಂದೆ ಪೊಲೀಸರಿಗೆ ತಿಳಿಸಿದ್ದಾರೆ. ಹಮೀದ್ ಜೊತೆಗಿನ ಸಂಬಂಧವನ್ನು ಮುರಿಯುವಂತೆ ಮಗಳನ್ನು ಕೇಳಿಕೊಂಡಿದ್ದಾರೆ. ಅಲ್ಲದೇ ಹಮೀದ್ ನನ್ನು ಭೇಟಿಯಾಗಿ ಮಗಳ ಜತೆಗಿನ ಸಂಬಂಧವನ್ನು ಮುಂದುವರಿಸದಂತೆ ಕೇಳಿಕೊಂಡಿದ್ದಾರೆ. ಆದರೆ ಹಮೀದ್ ಕೇಳಲಿಲ್ಲ ಮತ್ತು ಸಂಬಂಧವನ್ನು ಮುಂದುವರಿಸಲು ಮಗಳನ್ನು ಪೀಡಿಸುತ್ತಿದ್ದನು. ಸಂಬಂಧವನ್ನು ಮುಂದುವರಿಸಲು ಉದ್ದೇಶಿಸದಿದ್ದರೆ ಜೀವನವನ್ನು ಕೊನೆಗೊಳಿಸುವಂತೆ ಹಮೀದ್ ಬಾಲಕಿಗೆ ತಾಕೀತು ಮಾಡಿದ್ದ ಎಂದು ಬಾಲಕಿಯ ತಂದೆ ಹೇಳಿದ್ದಾರೆ.

ಅವರ ದೂರಿನ ಮೇರೆಗೆ ವಿಟ್ಲ ಪೊಲೀಸರು ಹಮೀದ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 305 ( ಅಪ್ರಾಪ್ತೆಯ ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಬಲಿಪಶು ಪರಿಶಿಷ್ಟ ಜಾತಿಗೆ ಸೇರಿದವರಾಗಿರುವುದರಿಂದ ಹಮೀದ್ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ 3 (2) (v) ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು