7:28 AM Sunday6 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ವಿಟ್ಲ ಪಂಚಲಿಂಗೇಶ್ವರ ದೇವರ ಅವಭೃತ ಸ್ನಾನಘಟ್ಟಕ್ಕೆ ಕಾಯಕಲ್ಪ: ಬಂಟ್ವಾಳ ಶಾಸಕರ ನಿಧಿಯಿಂದ ವಿಶೇಷ ಕೊಡುಗೆ

25/01/2023, 10:22

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka.com

ಸಣ್ಣ ನೀರಾವರಿ ಇಲಾಖೆ ಮೂಲಕ 45 ಲಕ್ಷ ವೆಚ್ಚದಲ್ಲಿ ಬಂಟ್ವಾಳ ಶಾಸಕರ ವಿಶೇಷ ಪ್ರಯತ್ನದ ಮೂಲಕ ನಿರ್ಮಾಣವಾದ ವಿಟ್ಲಪಡ್ನೂರು ಗ್ರಾಮದ ಮೂರ್ಕಜೆ ಕೊಡಂಗಾಯಿ ಪಂಚತೀರ್ಥದಲ್ಲಿ ಪಂಚಲಿಂಗೇಶ್ವರ ದೇವರ ಅವಬ್ರತ ಸ್ನಾನ ಘಟ್ಟ ಲೋಕಾರ್ಪಣೆಗೊಂಡಿತು.


ಸ್ನಾನಘಟದಲ್ಲಿ ಬೆಳಗೆ ಗಂಗಾ ಪೂಜೆ ಹಾಗೂ ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಳ್ ದೀಪ ಬೆಳಗಿಸಿ ಲೋಕಾರ್ಪಣೆ ಮಾಡಿದರು. ವಿಟ್ಲ ಸೀಮೆಗೆ ಸಂಬಂಧಿಸಿದ ಕೊಡಂಗಾಯಿ ನದಿಯ ನೀರು ಕಸಕಡ್ಡಿಗಳಿಂದ ಕಲುಷಿತಗೊಂಡಿದ್ದು, ಶಾಸಕರ ವಿಶೇಷ ಪ್ರಯತ್ನದ ಫಲವಾಗಿ ತಡೆಗೋಡೆ ನಿರ್ಮಾಣ ಹಾಗೂ ಮೆಟ್ಟಿಲುಗಳನ್ನು ನಿರ್ಮಾಣ ಮಾಡಿ ನದಿಯಲ್ಲಿ ಸ್ನಾನಘಟ್ಟವನ್ನು ನಿರ್ಮಾಣ ಮಾಡಲಾಗಿದೆ. ಈ ಭಾಗದ ಜನರ ಜೊತೆಗೆ ಭಕ್ತರಿಗೆ ಅನುಕೂಲವಾಗುವಂತೆ ಜೊತೆಗೆ ಇದೇ ನದಿಗೆ ಶಾಸಕರ ಅನುಮಾನದ ಮೂಲಕ ಕೃಷಿ ಹಾಗೂ ಜಲವೃದ್ದಿಗಾಗಿ ಕಿಂಡಿಅಣೆಕಟ್ಟು ನಿರ್ಮಾಣದ ಕಾರ್ಯ ಅಂತಿಮವಾಗಿದ್ದು, ಮುಂದಿನ ದಿನಗಳಲ್ಲಿ ಕೃಷಿಕರು ಇದರ ಸದುಪಯೋಗ ಪಡೆಯಲು ಅನುಕೂಲವಾಗಿದೆ.

ಸಭೆಯ ಅಧ್ಯಕ್ಷತೆಯನ್ನು ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರು ರೇಷ್ಮಾ ಶಂಕರಿ ಬಲಿಪಗುಳಿ ವಹಿಸಿದರು. ವೇದಿಕೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೀತಾರಾಮ ಕೆದಿಲಾಯ,
ಅಜಯ ಟ್ರಸ್ಟಿನ ಸದಸ್ಯರಾದ ರವೀಂದ್ರ ಪುಣಚ, ಕಟ್ಟೆ ಸಮಿತಿಯ ಅಧ್ಯಕ್ಷ ಮಂಜಯ್ಯ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರವೀಶ ಶೆಟ್ಟಿ ಕರ್ಕಳ, ಹಾಗೂ ಸಭೆಯಲ್ಲಿ ಮೈತ್ರಿ ಗುರುಕುಲ ಬಳಗ, ಗ್ರಾಮ ಪಂಚಾಯತಿ ಸದಸ್ಯರು, ಕಟ್ಟೆ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು