7:53 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ವಿಟ್ಲ ಪಂಚಲಿಂಗೇಶ್ವರ ದೇವರ ಅವಭೃತ ಸ್ನಾನಘಟ್ಟಕ್ಕೆ ಕಾಯಕಲ್ಪ: ಬಂಟ್ವಾಳ ಶಾಸಕರ ನಿಧಿಯಿಂದ ವಿಶೇಷ ಕೊಡುಗೆ

25/01/2023, 10:22

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka.com

ಸಣ್ಣ ನೀರಾವರಿ ಇಲಾಖೆ ಮೂಲಕ 45 ಲಕ್ಷ ವೆಚ್ಚದಲ್ಲಿ ಬಂಟ್ವಾಳ ಶಾಸಕರ ವಿಶೇಷ ಪ್ರಯತ್ನದ ಮೂಲಕ ನಿರ್ಮಾಣವಾದ ವಿಟ್ಲಪಡ್ನೂರು ಗ್ರಾಮದ ಮೂರ್ಕಜೆ ಕೊಡಂಗಾಯಿ ಪಂಚತೀರ್ಥದಲ್ಲಿ ಪಂಚಲಿಂಗೇಶ್ವರ ದೇವರ ಅವಬ್ರತ ಸ್ನಾನ ಘಟ್ಟ ಲೋಕಾರ್ಪಣೆಗೊಂಡಿತು.


ಸ್ನಾನಘಟದಲ್ಲಿ ಬೆಳಗೆ ಗಂಗಾ ಪೂಜೆ ಹಾಗೂ ವಿಟ್ಲ ಅರಮನೆಯ ಕೃಷ್ಣಯ್ಯ ಬಲ್ಲಾಳ್ ದೀಪ ಬೆಳಗಿಸಿ ಲೋಕಾರ್ಪಣೆ ಮಾಡಿದರು. ವಿಟ್ಲ ಸೀಮೆಗೆ ಸಂಬಂಧಿಸಿದ ಕೊಡಂಗಾಯಿ ನದಿಯ ನೀರು ಕಸಕಡ್ಡಿಗಳಿಂದ ಕಲುಷಿತಗೊಂಡಿದ್ದು, ಶಾಸಕರ ವಿಶೇಷ ಪ್ರಯತ್ನದ ಫಲವಾಗಿ ತಡೆಗೋಡೆ ನಿರ್ಮಾಣ ಹಾಗೂ ಮೆಟ್ಟಿಲುಗಳನ್ನು ನಿರ್ಮಾಣ ಮಾಡಿ ನದಿಯಲ್ಲಿ ಸ್ನಾನಘಟ್ಟವನ್ನು ನಿರ್ಮಾಣ ಮಾಡಲಾಗಿದೆ. ಈ ಭಾಗದ ಜನರ ಜೊತೆಗೆ ಭಕ್ತರಿಗೆ ಅನುಕೂಲವಾಗುವಂತೆ ಜೊತೆಗೆ ಇದೇ ನದಿಗೆ ಶಾಸಕರ ಅನುಮಾನದ ಮೂಲಕ ಕೃಷಿ ಹಾಗೂ ಜಲವೃದ್ದಿಗಾಗಿ ಕಿಂಡಿಅಣೆಕಟ್ಟು ನಿರ್ಮಾಣದ ಕಾರ್ಯ ಅಂತಿಮವಾಗಿದ್ದು, ಮುಂದಿನ ದಿನಗಳಲ್ಲಿ ಕೃಷಿಕರು ಇದರ ಸದುಪಯೋಗ ಪಡೆಯಲು ಅನುಕೂಲವಾಗಿದೆ.

ಸಭೆಯ ಅಧ್ಯಕ್ಷತೆಯನ್ನು ವಿಟ್ಲಪಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರು ರೇಷ್ಮಾ ಶಂಕರಿ ಬಲಿಪಗುಳಿ ವಹಿಸಿದರು. ವೇದಿಕೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೀತಾರಾಮ ಕೆದಿಲಾಯ,
ಅಜಯ ಟ್ರಸ್ಟಿನ ಸದಸ್ಯರಾದ ರವೀಂದ್ರ ಪುಣಚ, ಕಟ್ಟೆ ಸಮಿತಿಯ ಅಧ್ಯಕ್ಷ ಮಂಜಯ್ಯ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರವೀಶ ಶೆಟ್ಟಿ ಕರ್ಕಳ, ಹಾಗೂ ಸಭೆಯಲ್ಲಿ ಮೈತ್ರಿ ಗುರುಕುಲ ಬಳಗ, ಗ್ರಾಮ ಪಂಚಾಯತಿ ಸದಸ್ಯರು, ಕಟ್ಟೆ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು