9:53 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ವಿವಾದಿತ ಹೇಳಿಕೆ ಕುರಿತು ಈಶ್ವರಪ್ಪರ ಕರೆಸಿ ಛೀಮಾರಿ ಹಾಕುವೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ

22/02/2022, 14:19

ಹೊಸದಿಲ್ಲಿ(reporterkarnataka.com):

ರಾಷ್ಟ್ರಧ್ವಜದ ಬದಲಿಗೆ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು ಎಂದು ವಿವಾದಿತ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕರೆಸಿ ಛೀಮಾರಿ ಹಾಕುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಡ್ಡಾ ಅವರು, “ನಾನು ಈಶ್ವರಪ್ಪ ಅವರಿಗೆ ಕರೆ ಮಾಡಿ ಕೇಸರಿ ಧ್ವಜದ ಕುರಿತ ಅವರ ಹೇಳಿಕೆಗಾಗಿ ಅವರನ್ನು ಬೈದಿದ್ದೇನೆ” ಎಂದು ಹೇಳಿದ್ದಾರೆ.

ಭಗವಾಧ್ವಜ ರಾಷ್ಟ್ರಧ್ವಜವಾಗಲು ಸಾಧ್ಯವೆ ಇಲ್ಲ. ಇಂತಹ ಮಾತಗಳನ್ನು ಆಡಬಾರದು. ಇಂತಹ ವಿಷಯಗಳಲ್ಲಿ ನಾನು ತಡ ಮಾಡುವುದೇ ಇಲ್ಲ. ನಾವು ಕಾನೂನಿನ ಆಧಾರದಲ್ಲಿ ನಡೆದುಕೊಳ್ಳುವ ಜನ. ಸಂವಿಧಾನವನ್ನು ಒಪ್ಪುವವರು, ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಇರುವವರು. ನಾವು ರಾಷ್ಟ್ರೀಯವಾದಿಗಳು. ಇಂತಹ ತಪ್ಪು ಮಾಹಿತಿ, ಬೇಜವಾಬ್ದಾರಿ ಹೇಳಿಕೆಗಳನ್ನು ನಾವು ಸಹಿಸುವುದಿಲ್ಲ. ಕ್ಷಮೆ ಇರಲಿ ಎಂದು ನುಡಿದಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಫೆಬ್ರವರಿ 9ರಂದು ಪ್ರತಿಕ್ರಿಯಿಸಿದ್ದ ಸಚಿವ  ಈಶ್ವರಪ್ಪ, “ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು” ಎಂದು ವಿವಾದಿತ ಹೇಳಿಕೆ ನೀಡಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು