5:14 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ವಿವಾದಿತ ಹೇಳಿಕೆ ಕುರಿತು ಈಶ್ವರಪ್ಪರ ಕರೆಸಿ ಛೀಮಾರಿ ಹಾಕುವೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ

22/02/2022, 14:19

ಹೊಸದಿಲ್ಲಿ(reporterkarnataka.com):

ರಾಷ್ಟ್ರಧ್ವಜದ ಬದಲಿಗೆ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು ಎಂದು ವಿವಾದಿತ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕರೆಸಿ ಛೀಮಾರಿ ಹಾಕುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಡ್ಡಾ ಅವರು, “ನಾನು ಈಶ್ವರಪ್ಪ ಅವರಿಗೆ ಕರೆ ಮಾಡಿ ಕೇಸರಿ ಧ್ವಜದ ಕುರಿತ ಅವರ ಹೇಳಿಕೆಗಾಗಿ ಅವರನ್ನು ಬೈದಿದ್ದೇನೆ” ಎಂದು ಹೇಳಿದ್ದಾರೆ.

ಭಗವಾಧ್ವಜ ರಾಷ್ಟ್ರಧ್ವಜವಾಗಲು ಸಾಧ್ಯವೆ ಇಲ್ಲ. ಇಂತಹ ಮಾತಗಳನ್ನು ಆಡಬಾರದು. ಇಂತಹ ವಿಷಯಗಳಲ್ಲಿ ನಾನು ತಡ ಮಾಡುವುದೇ ಇಲ್ಲ. ನಾವು ಕಾನೂನಿನ ಆಧಾರದಲ್ಲಿ ನಡೆದುಕೊಳ್ಳುವ ಜನ. ಸಂವಿಧಾನವನ್ನು ಒಪ್ಪುವವರು, ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಇರುವವರು. ನಾವು ರಾಷ್ಟ್ರೀಯವಾದಿಗಳು. ಇಂತಹ ತಪ್ಪು ಮಾಹಿತಿ, ಬೇಜವಾಬ್ದಾರಿ ಹೇಳಿಕೆಗಳನ್ನು ನಾವು ಸಹಿಸುವುದಿಲ್ಲ. ಕ್ಷಮೆ ಇರಲಿ ಎಂದು ನುಡಿದಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಫೆಬ್ರವರಿ 9ರಂದು ಪ್ರತಿಕ್ರಿಯಿಸಿದ್ದ ಸಚಿವ  ಈಶ್ವರಪ್ಪ, “ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು” ಎಂದು ವಿವಾದಿತ ಹೇಳಿಕೆ ನೀಡಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು