12:58 PM Monday6 - July 2026
ಬ್ರೇಕಿಂಗ್ ನ್ಯೂಸ್
ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ…

ಇತ್ತೀಚಿನ ಸುದ್ದಿ

ವಿವಾದಿತ ಹೇಳಿಕೆ ಕುರಿತು ಈಶ್ವರಪ್ಪರ ಕರೆಸಿ ಛೀಮಾರಿ ಹಾಕುವೆ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ

22/02/2022, 14:19

ಹೊಸದಿಲ್ಲಿ(reporterkarnataka.com):

ರಾಷ್ಟ್ರಧ್ವಜದ ಬದಲಿಗೆ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು ಎಂದು ವಿವಾದಿತ ಹೇಳಿಕೆ ನೀಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕರೆಸಿ ಛೀಮಾರಿ ಹಾಕುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನಡ್ಡಾ ಅವರು, “ನಾನು ಈಶ್ವರಪ್ಪ ಅವರಿಗೆ ಕರೆ ಮಾಡಿ ಕೇಸರಿ ಧ್ವಜದ ಕುರಿತ ಅವರ ಹೇಳಿಕೆಗಾಗಿ ಅವರನ್ನು ಬೈದಿದ್ದೇನೆ” ಎಂದು ಹೇಳಿದ್ದಾರೆ.

ಭಗವಾಧ್ವಜ ರಾಷ್ಟ್ರಧ್ವಜವಾಗಲು ಸಾಧ್ಯವೆ ಇಲ್ಲ. ಇಂತಹ ಮಾತಗಳನ್ನು ಆಡಬಾರದು. ಇಂತಹ ವಿಷಯಗಳಲ್ಲಿ ನಾನು ತಡ ಮಾಡುವುದೇ ಇಲ್ಲ. ನಾವು ಕಾನೂನಿನ ಆಧಾರದಲ್ಲಿ ನಡೆದುಕೊಳ್ಳುವ ಜನ. ಸಂವಿಧಾನವನ್ನು ಒಪ್ಪುವವರು, ಸಂವಿಧಾನವನ್ನು ರಕ್ಷಿಸುವ ಜವಾಬ್ದಾರಿ ಇರುವವರು. ನಾವು ರಾಷ್ಟ್ರೀಯವಾದಿಗಳು. ಇಂತಹ ತಪ್ಪು ಮಾಹಿತಿ, ಬೇಜವಾಬ್ದಾರಿ ಹೇಳಿಕೆಗಳನ್ನು ನಾವು ಸಹಿಸುವುದಿಲ್ಲ. ಕ್ಷಮೆ ಇರಲಿ ಎಂದು ನುಡಿದಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ತಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಫೆಬ್ರವರಿ 9ರಂದು ಪ್ರತಿಕ್ರಿಯಿಸಿದ್ದ ಸಚಿವ  ಈಶ್ವರಪ್ಪ, “ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು” ಎಂದು ವಿವಾದಿತ ಹೇಳಿಕೆ ನೀಡಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು