10:51 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಹೀಗೊಂದು ಹೃದಯ ವಿದ್ರಾಯಕ ಘಟನೆ: ಅತ್ತ ಆಸ್ಪತ್ರೆ ಶವಾಗಾರದಲ್ಲಿ ಹೆಣವಾಗಿ ಮಲಗಿದ್ದ ಅಪ್ಪ; ಇತ್ತ ಮಗಳ ವಿವಾಹ ಸಂಭ್ರಮ

20/01/2025, 18:14

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅತ್ತ ಆಸ್ಪತ್ರೆಯ ಶವಾಗಾರದಲ್ಲಿ ಅಪ್ಪನ ಶವ. ಇತ್ತ ಮದುವೆ ಮಂಟಪದಲ್ಲಿ ಮಗಳಿಗೆ ಮದುವೆ ವೈಭವ ನಡೆದ ಹೃದಯ ವಿದ್ರಾಯಕ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ.
ಅಪ್ಪ ಮದುವೆ ಓಡಾಟದಲ್ಲಿ ಸುಸ್ತಾಗಿ ಆಸ್ಪತ್ರೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ ಎಂದು ಮಗಳನ್ನು ನಂಬಿಸಿ ಸಂಬಂಧಿಕರು ಈ ವಿವಾಹ ಕಾರ್ಯ ನೆರವೇರಿಸಿದ್ದಾರೆ. ಮೃತರ ಪತ್ನಿಗೂ ಇದೇ ರೀತಿ ಹೇಳಿ ನಂಬಿಸಲಾಗಿತ್ತು.
ಮಗಳ ಮದುವೆ ಲಗ್ನಪತ್ರಿಕೆ ಕೊಡಲು ಹೋಗಿದ್ದ ಅಪ್ಪ
ಚೀಲದ ಪಾಪಣ್ಣನವರ ಮಗ ಚಂದ್ರು (45)
ಅಪಘಾತದಲ್ಲಿ ಸಾವನ್ನಪ್ಪಿದ್ದರು. ಮಗಳಿಗೆ-ಪತ್ನಿಗೆ ಈ ವಿಷಯವನ್ನು ಸಂಬಂಧಿಕರು ತಿಳಿಸದೆ ಚಂದ್ರು ಮಗಳು ದೀಕ್ಷೀತಾಳ ಮದುವೆಯನ್ನು ಇಂದು ಸಂಬಂಧಿಕರು ನೆರವೇರಿಸಿದ್ದಾರೆ.
ನಿನ್ನೆ ಬೆಳಗ್ಗೆ ತರೀಕೆರೆ ತಾಲೂಕಿನ ಹುಲಿತಿಮ್ಮಾಪುರಕ್ಕೆ ಲಗ್ನಪತ್ರಿಕೆ ಕೊಡಲು ಹೋಗಿದ್ದ ಚಂದ್ರು ಅವರು ತರೀಕೆರೆಗೆ ವಾಪಸ್ ಬರುವಾಗ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಅಪ್ಪ ಆಸ್ಪತ್ರೆಯಲ್ಲಿ ಇದ್ದಾರೆ ಎಂದು ನಂಬಿಸಿ ಸಂಬಂಧಿಕರು ಆರತಕ್ಷತೆ-ಮದುವೆ ಮುಗಿಸಿದ್ದಾರೆ.
ಇಂದು ಮದುವೆ ಮುಗಿದ ಬಳಿಕ ಪತ್ನಿಗೆ-ಮಗಳಿಗೆ ಕುಟುಂಬಸ್ಥರು ವಿಷಯ ತಿಳಿಸಿದ್ದಾರೆ.
ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಪತ್ನಿ-ಮಗಳ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು