5:02 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ವಿವೇಕಾನಂದ ಶಿಶು ಮಂದಿರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಆರಂಭ

08/12/2024, 19:59

ಪುತ್ತೂರು(reporterkarnataka.com): ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ ಶುಕ್ರವಾರ ದೇವಾಲಯಗಳ ಸಂವರ್ಧನ ಸಮಿತಿ ವತಿಯಿಂದ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯನ್ನು, ಆರಂಭಿಸಲಾಯಿತು.
ಕೃಷ್ಣವೇಣಿ ಪ್ರಸಾದ್ ಮುಳಿಯ ಅವರು ಹಿಂದೂ ಧಾರ್ಮಿಕ ಶಿಕ್ಷಣದ ಉದ್ದೇಶ ಮತ್ತು ಅದರ ವಿಶೇಷತೆಗಳನ್ನು ತಿಳಿಸಿದರು. ಬಳಿಕ ಶ್ಲೋಕವೊಂದರ ಅರ್ಥ, ದೈನಂದಿನ ಜೀವನದಲ್ಲಿ ಆಚಾರ – ವಿಚಾರಗಳು ವೈಜ್ಞಾನಿಕ ತಳಹದಿ ಮೇಲೆ ಪರಂಪರಾಗತವಾಗಿ ಹೇಗೆ ರೂಪುಗೊಂಡಿವೆ ಎಂಬುದನ್ನು ವಿವರಿಸಿ, ಭಜನೆಯನ್ನು ನಡೆಸಿಕೊಟ್ಟರು.

ಶಂಕರಿ ಶರ್ಮ ಅವರು ಕನ್ನಡದ ಭಗವದ್ಗೀತೆ ಎನಿಸಿಕೊಂಡಿರುವ ಡಿ.ವಿ.ಜಿ.ಯವರ ಕಗ್ಗವೊಂದನ್ನು ಪ್ರಸ್ತುತಪಡಿಸಿದರು. ಮುಂದೆ, ಅದರ ಅರ್ಥವನ್ನು ವಿವರಿಸುತ್ತಾ ಇಂದಿನ ಕಾಲಘಟ್ಟದಲ್ಲಿ ಅದರ ಅಗತ್ಯತೆಯನ್ನು ತಿಳಿಸಿದರು. ಬಳಿಕ ಪೌರಾಣಿಕ ಕಥೆಯೊಂದನ್ನು ಹೇಳಿ, ಅದರ ವಿಶೇಷತೆಯನ್ನು ವಿವರಿಸಿದರು.
ಶಿಶುಮಂದಿರದ ಆಡಳಿತ ಮಂಡಳಿಯಲ್ಲಿ ಕೋಶಾಧಿಕಾರಿಯಾಗಿರುವ
ಚಂದ್ರಪ್ರಭಾ ಅವರು ಭಗವದ್ಗೀತೆಯ ಮಹತ್ವವನ್ನು ತಿಳಿಸಿದರು. ಮಾತೃಭಾರತಿ ಸದಸ್ಯೆಯರಾದ ಲಕ್ಷ್ಮೀಪ್ರಭ ಸ್ವಾಗತಿಸಿ, ರಮ್ಯ ಧನ್ಯವಾದ ಸಮರ್ಪಿಸಿದರು. ಮುಖ್ಯಮಾತಾಜಿ ರೇಖಾ ಕುಮಾರಿ, ಮಾತಾಜಿಯವರಾದ ಹರ್ಷಿತಾ, ದಿವ್ಯ ಮತ್ತು ಪದ್ಮಪ್ರಿಯ, ಪೋಷಕರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು