8:58 PM Wednesday12 - November 2025
ಬ್ರೇಕಿಂಗ್ ನ್ಯೂಸ್
Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

ಇತ್ತೀಚಿನ ಸುದ್ದಿ

ವಿವೇಕಾನಂದ ಶಿಶು ಮಂದಿರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಆರಂಭ

08/12/2024, 19:59

ಪುತ್ತೂರು(reporterkarnataka.com): ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ ಶುಕ್ರವಾರ ದೇವಾಲಯಗಳ ಸಂವರ್ಧನ ಸಮಿತಿ ವತಿಯಿಂದ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯನ್ನು, ಆರಂಭಿಸಲಾಯಿತು.
ಕೃಷ್ಣವೇಣಿ ಪ್ರಸಾದ್ ಮುಳಿಯ ಅವರು ಹಿಂದೂ ಧಾರ್ಮಿಕ ಶಿಕ್ಷಣದ ಉದ್ದೇಶ ಮತ್ತು ಅದರ ವಿಶೇಷತೆಗಳನ್ನು ತಿಳಿಸಿದರು. ಬಳಿಕ ಶ್ಲೋಕವೊಂದರ ಅರ್ಥ, ದೈನಂದಿನ ಜೀವನದಲ್ಲಿ ಆಚಾರ – ವಿಚಾರಗಳು ವೈಜ್ಞಾನಿಕ ತಳಹದಿ ಮೇಲೆ ಪರಂಪರಾಗತವಾಗಿ ಹೇಗೆ ರೂಪುಗೊಂಡಿವೆ ಎಂಬುದನ್ನು ವಿವರಿಸಿ, ಭಜನೆಯನ್ನು ನಡೆಸಿಕೊಟ್ಟರು.

ಶಂಕರಿ ಶರ್ಮ ಅವರು ಕನ್ನಡದ ಭಗವದ್ಗೀತೆ ಎನಿಸಿಕೊಂಡಿರುವ ಡಿ.ವಿ.ಜಿ.ಯವರ ಕಗ್ಗವೊಂದನ್ನು ಪ್ರಸ್ತುತಪಡಿಸಿದರು. ಮುಂದೆ, ಅದರ ಅರ್ಥವನ್ನು ವಿವರಿಸುತ್ತಾ ಇಂದಿನ ಕಾಲಘಟ್ಟದಲ್ಲಿ ಅದರ ಅಗತ್ಯತೆಯನ್ನು ತಿಳಿಸಿದರು. ಬಳಿಕ ಪೌರಾಣಿಕ ಕಥೆಯೊಂದನ್ನು ಹೇಳಿ, ಅದರ ವಿಶೇಷತೆಯನ್ನು ವಿವರಿಸಿದರು.
ಶಿಶುಮಂದಿರದ ಆಡಳಿತ ಮಂಡಳಿಯಲ್ಲಿ ಕೋಶಾಧಿಕಾರಿಯಾಗಿರುವ
ಚಂದ್ರಪ್ರಭಾ ಅವರು ಭಗವದ್ಗೀತೆಯ ಮಹತ್ವವನ್ನು ತಿಳಿಸಿದರು. ಮಾತೃಭಾರತಿ ಸದಸ್ಯೆಯರಾದ ಲಕ್ಷ್ಮೀಪ್ರಭ ಸ್ವಾಗತಿಸಿ, ರಮ್ಯ ಧನ್ಯವಾದ ಸಮರ್ಪಿಸಿದರು. ಮುಖ್ಯಮಾತಾಜಿ ರೇಖಾ ಕುಮಾರಿ, ಮಾತಾಜಿಯವರಾದ ಹರ್ಷಿತಾ, ದಿವ್ಯ ಮತ್ತು ಪದ್ಮಪ್ರಿಯ, ಪೋಷಕರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು