7:03 AM Tuesday9 - June 2026
ಬ್ರೇಕಿಂಗ್ ನ್ಯೂಸ್
ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ…

ಇತ್ತೀಚಿನ ಸುದ್ದಿ

ವಿವೇಕಾನಂದ ಶಿಶು ಮಂದಿರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಆರಂಭ

08/12/2024, 19:59

ಪುತ್ತೂರು(reporterkarnataka.com): ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ ಶುಕ್ರವಾರ ದೇವಾಲಯಗಳ ಸಂವರ್ಧನ ಸಮಿತಿ ವತಿಯಿಂದ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯನ್ನು, ಆರಂಭಿಸಲಾಯಿತು.
ಕೃಷ್ಣವೇಣಿ ಪ್ರಸಾದ್ ಮುಳಿಯ ಅವರು ಹಿಂದೂ ಧಾರ್ಮಿಕ ಶಿಕ್ಷಣದ ಉದ್ದೇಶ ಮತ್ತು ಅದರ ವಿಶೇಷತೆಗಳನ್ನು ತಿಳಿಸಿದರು. ಬಳಿಕ ಶ್ಲೋಕವೊಂದರ ಅರ್ಥ, ದೈನಂದಿನ ಜೀವನದಲ್ಲಿ ಆಚಾರ – ವಿಚಾರಗಳು ವೈಜ್ಞಾನಿಕ ತಳಹದಿ ಮೇಲೆ ಪರಂಪರಾಗತವಾಗಿ ಹೇಗೆ ರೂಪುಗೊಂಡಿವೆ ಎಂಬುದನ್ನು ವಿವರಿಸಿ, ಭಜನೆಯನ್ನು ನಡೆಸಿಕೊಟ್ಟರು.

ಶಂಕರಿ ಶರ್ಮ ಅವರು ಕನ್ನಡದ ಭಗವದ್ಗೀತೆ ಎನಿಸಿಕೊಂಡಿರುವ ಡಿ.ವಿ.ಜಿ.ಯವರ ಕಗ್ಗವೊಂದನ್ನು ಪ್ರಸ್ತುತಪಡಿಸಿದರು. ಮುಂದೆ, ಅದರ ಅರ್ಥವನ್ನು ವಿವರಿಸುತ್ತಾ ಇಂದಿನ ಕಾಲಘಟ್ಟದಲ್ಲಿ ಅದರ ಅಗತ್ಯತೆಯನ್ನು ತಿಳಿಸಿದರು. ಬಳಿಕ ಪೌರಾಣಿಕ ಕಥೆಯೊಂದನ್ನು ಹೇಳಿ, ಅದರ ವಿಶೇಷತೆಯನ್ನು ವಿವರಿಸಿದರು.
ಶಿಶುಮಂದಿರದ ಆಡಳಿತ ಮಂಡಳಿಯಲ್ಲಿ ಕೋಶಾಧಿಕಾರಿಯಾಗಿರುವ
ಚಂದ್ರಪ್ರಭಾ ಅವರು ಭಗವದ್ಗೀತೆಯ ಮಹತ್ವವನ್ನು ತಿಳಿಸಿದರು. ಮಾತೃಭಾರತಿ ಸದಸ್ಯೆಯರಾದ ಲಕ್ಷ್ಮೀಪ್ರಭ ಸ್ವಾಗತಿಸಿ, ರಮ್ಯ ಧನ್ಯವಾದ ಸಮರ್ಪಿಸಿದರು. ಮುಖ್ಯಮಾತಾಜಿ ರೇಖಾ ಕುಮಾರಿ, ಮಾತಾಜಿಯವರಾದ ಹರ್ಷಿತಾ, ದಿವ್ಯ ಮತ್ತು ಪದ್ಮಪ್ರಿಯ, ಪೋಷಕರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು