8:16 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ವಿವೇಕಾನಂದ ಶಿಶು ಮಂದಿರದಲ್ಲಿ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯ ಆರಂಭ

08/12/2024, 19:59

ಪುತ್ತೂರು(reporterkarnataka.com): ಶಿವಪೇಟೆಯಲ್ಲಿರುವ ವಿವೇಕಾನಂದ ಶಿಶುಮಂದಿರದಲ್ಲಿ ಶುಕ್ರವಾರ ದೇವಾಲಯಗಳ ಸಂವರ್ಧನ ಸಮಿತಿ ವತಿಯಿಂದ ಹಿಂದೂ ಧಾರ್ಮಿಕ ಶಿಕ್ಷಣ ಶಾಖೆಯನ್ನು, ಆರಂಭಿಸಲಾಯಿತು.
ಕೃಷ್ಣವೇಣಿ ಪ್ರಸಾದ್ ಮುಳಿಯ ಅವರು ಹಿಂದೂ ಧಾರ್ಮಿಕ ಶಿಕ್ಷಣದ ಉದ್ದೇಶ ಮತ್ತು ಅದರ ವಿಶೇಷತೆಗಳನ್ನು ತಿಳಿಸಿದರು. ಬಳಿಕ ಶ್ಲೋಕವೊಂದರ ಅರ್ಥ, ದೈನಂದಿನ ಜೀವನದಲ್ಲಿ ಆಚಾರ – ವಿಚಾರಗಳು ವೈಜ್ಞಾನಿಕ ತಳಹದಿ ಮೇಲೆ ಪರಂಪರಾಗತವಾಗಿ ಹೇಗೆ ರೂಪುಗೊಂಡಿವೆ ಎಂಬುದನ್ನು ವಿವರಿಸಿ, ಭಜನೆಯನ್ನು ನಡೆಸಿಕೊಟ್ಟರು.

ಶಂಕರಿ ಶರ್ಮ ಅವರು ಕನ್ನಡದ ಭಗವದ್ಗೀತೆ ಎನಿಸಿಕೊಂಡಿರುವ ಡಿ.ವಿ.ಜಿ.ಯವರ ಕಗ್ಗವೊಂದನ್ನು ಪ್ರಸ್ತುತಪಡಿಸಿದರು. ಮುಂದೆ, ಅದರ ಅರ್ಥವನ್ನು ವಿವರಿಸುತ್ತಾ ಇಂದಿನ ಕಾಲಘಟ್ಟದಲ್ಲಿ ಅದರ ಅಗತ್ಯತೆಯನ್ನು ತಿಳಿಸಿದರು. ಬಳಿಕ ಪೌರಾಣಿಕ ಕಥೆಯೊಂದನ್ನು ಹೇಳಿ, ಅದರ ವಿಶೇಷತೆಯನ್ನು ವಿವರಿಸಿದರು.
ಶಿಶುಮಂದಿರದ ಆಡಳಿತ ಮಂಡಳಿಯಲ್ಲಿ ಕೋಶಾಧಿಕಾರಿಯಾಗಿರುವ
ಚಂದ್ರಪ್ರಭಾ ಅವರು ಭಗವದ್ಗೀತೆಯ ಮಹತ್ವವನ್ನು ತಿಳಿಸಿದರು. ಮಾತೃಭಾರತಿ ಸದಸ್ಯೆಯರಾದ ಲಕ್ಷ್ಮೀಪ್ರಭ ಸ್ವಾಗತಿಸಿ, ರಮ್ಯ ಧನ್ಯವಾದ ಸಮರ್ಪಿಸಿದರು. ಮುಖ್ಯಮಾತಾಜಿ ರೇಖಾ ಕುಮಾರಿ, ಮಾತಾಜಿಯವರಾದ ಹರ್ಷಿತಾ, ದಿವ್ಯ ಮತ್ತು ಪದ್ಮಪ್ರಿಯ, ಪೋಷಕರು ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು