5:00 AM Monday24 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ವಿವೇಕ ಸಪ್ತಾಹ: ಮಂಗಳೂರಿನಲ್ಲಿ ಮಾದಕ ದ್ರವ್ಯದ ಬಗ್ಗೆ ಅರಿವು ಕಾರ್ಯಕ್ರಮ

15/01/2022, 01:16

ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯು ವಿವೇಕ ಸಪ್ತಾಹದ ಪ್ರಯುಕ್ತ ಮಾದಕ ದ್ರವ್ಯದ ಬಗ್ಗೆ ಅರಿವು ಕಾರ್ಯಕ್ರಮ ಶುಕ್ರವಾರ ಕೆನರಾ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.





ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಪೊಲೀಸ್ ಕಮಿಷನರ್
ಶಶಿಕುಮಾರ್ ನೆರವೇರಿಸಿ ದುಶ್ಚಟಗಳಿಗೆ ಬಲಿಯಾಗದಂತೆ ವಿದ್ಯಾರ್ಥಿ ಜೀವನವನ್ನು ಸರಿಯಾಗಿ ಬಳಸಿಕೊಳ್ಳಿ ಎಂದು ಮನದಟ್ಟು ಮಾಡಿದರು.

ಮುಖ್ಯ ಅತಿಥಿಯಾಗಿ, ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟ್ರೀಯ ಸೇವಾಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ ಮಾತನಾಡಿ ಮಾದಕ ದ್ರವ್ಯದ ವ್ಯಾಸನಿಗಳಾಗಿ ಮುಂದಿನ ಭವಿಷ್ಯವನ್ನು ಹಾಳು ಮಾಡಿಕೊಳ್ಳಬೇಡಿ. ವಿವೇಕಾನಂದರು ರಾಷ್ಟ್ರದ ಶಕ್ತಿಯೇ ಯುವಕರು ಎಂದು ಅವರು ಹೇಳಿದ್ದರು.. ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಗೊಂಡು ಮಾದಕ ವಸ್ತುಗಳ ದಾಸರಾಗದೆ ಉತ್ತಮ ಜೀವನವನ್ನು ರೂಪಿಸಿಕೊಳ್ಳಿ.ಎಂದು ಅವರು ಹೇಳಿದರು.

ಕೆನರಾ ಹೈಸ್ಕೂಲ್ ಅಸೋಶಿಯೇಷನ್ ಪರ್ಯಾಯ ಖಜಾಂಜಿ ಪುರುಷೋತ್ತಮ,ಕೆನರಾ ಕಾಲೇಜಿನ ರಾ. ಸೆ. ಯೋ ಯೋಜನಾಧಿಕಾರಿಗಳಾದ ಸೀಮಾ ಪ್ರಭು,ವಾಣಿ.ಯು.ಎಸ್ ಉಪಸ್ಥಿತರಿದ್ದರು.


ಸಮಾಪನ್ಮೂಲ ವ್ಯಕ್ತಿ ಯಾಗಿ, ಫಾದರ್ ಮುಲ್ಲರ್ ಆಸ್ಪತ್ರೆಯ ಮಾನಸಿಕ ವಿಭಾಗದ ಡಾ.ಅವಿನಾಶ್ ಜಾಯಿ ಮಾದಕ ದ್ರವ್ಯದ ವ್ಯಸನದಿಂದ ಅರೋಗ್ಯದ ಮೇಲಾಗುವ ದುಷ್ಪಾರಿಣಾಮದ ಬಗ್ಗೆ
ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.



ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಪ್ರೇಮಲತಾ.ವಿ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು